ಬೆಂಗಳೂರು : ಕೊರೊನಾ ರೂಪಾಂತರ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ಮಾಡಿದ್ದ ರಾಜ್ಯ ಸರ್ಕಾರ, ಸಾರ್ವಜನಿಕರ ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ರಾಜ್ಯ ಸರ್ಕಾರ ನೈಟ್ ಕರ್ಪ್ಯೂ ಆದೇಶ ವಾಪಾಸ್ ಪಡೆದಿದೆ.
ಬ್ರಿಟನ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ನೈಟ್ ಕರ್ಫ್ಯೂ ಜಾರಿಗೆ ತರಲು ತೀರ್ಮಾನಿಸಲಾಗಿತ್ತು.ಸರ್ಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ನೈಟ್ ಕರ್ಫ್ಯೂ ಅಗತ್ಯವಿಲ್ಲ ಎಂಬ ಅಭಿಪ್ರಾಯಗಳು ವ್ಯಕ್ತಸಿದ್ದಾರೆ. ಹೀಗಾಗಿ ಸರ್ಕಾರದ ತೀರ್ಮಾನ ಮರು ಪರಿಶೀಲಿಸಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ನೈಟ್ ಕರ್ಫ್ಯೂ ಹಿಂಪಡೆಯಲು ತೀರ್ಮಾನಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರು ಸ್ವಯಂ ನಿರ್ಭಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯುವಂತೆ ಮನವಿ ಮಾಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇಂದು ರಾತ್ರಿಯಿಂದ ಜಾರಿಗೆ ಬರಲಿದ್ದಂತ ನೈಟ್ ಕರ್ಪ್ಯೂ ಆದೇಶವನ್ನು ರಾಜ್ಯ ಸರ್ಕಾರ ಇದೀಗ ವಾಪಾಸ್ ಪಡೆದಿದೆ.



