ಬೆಂಗಳೂರು:ಟ್ರ್ಯಾಕ್ಟರ್ ಕಳ್ಳತನ ಮಾಡಿದ್ದ ಐವರನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದು, 1.46 ಕೋಟಿ ರೂ. ಮೌಲ್ಯದ ಟ್ರ್ಯಾಕ್ಟರ್ಗಳು, ಮಾರುತಿ ವ್ಯಾನ್ಗಳು, ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಆನಂದ್, ಯಾಕೂಬ್ ಖಾನ್, ಲಿಂಗಪ್ಪ, ಲೋಕೇಶ ಮತ್ತು ವಿ. ಲೋಕೇಶ ಬಂಧಿತರು. ಅಕ್ಟೋಬರ್ 18ರಂದು ಸಂಜೆ 6 ಗಂಟೆ ಸುಮಾರಿನಲ್ಲಿ ಸುಂಕದಕಟ್ಟೆಯ ಹೊಯ್ಸಳ ನಗರ ಪಾರ್ಕ್ ಹತ್ತಿರ ನಿಲ್ಲಿಸಿದ್ದ ವ್ಯಕ್ತಿಯೊಬ್ಬರ 5 ಲಕ್ಷ ರೂ. ಬೆಲೆ ಬಾಳುವ ಟ್ರ್ಯಾಕ್ಟರ್ ಕಳ್ಳತನವಾಗಿತ್ತು. ಈ ಬಗ್ಗೆ ಕಾಮಾಕ್ಷಿ ಪಾಳ್ಯ ಠಾಣೆಯಲ್ಲಿ ಪ್ರಕರಣದ ದಾಖಲಾಗಿತ್ತು.
ತನಿಖೆ ಕೈಗೊಂಡ ಇನ್ಸ್ಪೆಕ್ಟರ್ ಪ್ರಶಾಂತ್ ಹಾಗೂ ಸಿಬ್ಬಂದಿ, ಆರೋಪಿ ಬೋರೇಗೌಡ ಎಂಬಾತನನ್ನು ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರ್ಯಾಕ್ಟರ್ ಹಾಗೂ ಪೀಣ್ಯ, ಬ್ಯಾಡರಹಳ್ಳಿ, ಜ್ಞಾನಭಾರತಿ ಠಾಣೆ ವ್ಯಾಪ್ತಿಗಳಲ್ಲಿ ಹಾಗೂ ಕರ್ನಾಟಕದ ಇತರೇ ಜಿಲ್ಲೆಗಳ ಠಾಣಾ ವ್ಯಾಪ್ತಿಗಳಲ್ಲಿ ಕಳವು ಮಾಡಿದ್ದ 55 ಲಕ್ಷ ಬೆಲೆ ಬಾಳುವ 12 ಟ್ರ್ಯಾಕ್ಟರ್ಗಳು, ಓಮಿನಿ ಕಾರು ಮತ್ತು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.



