ನವದೆಹಲಿ: ದೇಶದ ಜನತೆಗೆ ಕೇಂದ್ರ ಸರ್ಕಾರ ಕೊರೊನಾ ಸೋಂಕಿತರಿಗೆ ಗುಡ್ ನ್ಯೂಸ್ ನೀಡಿದ್ದು, ದೇಶದ ಎಲ್ಲಾ ನಾಗರಿಕರಿಗೆ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಡಾ ಹರ್ಷ ವರ್ಧನ್ ತಿಳಿಸಿದ್ದಾರೆ.
ಕೊರೋನಾ ಲಸಿಕೆ ಕುರಿತು ತಲೀಮು ಕುರಿತು ಶನಿವಾರ ದೇಶದ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಡ್ರೈ ರನ್ ನ್ನು ಆರಂಭಿಸಿದ್ದು, ಇಂದು ದೆಹಲಿಯ ಜಿಟಿಬಿ ಆಸ್ಪತ್ರೆಗೆ ಸಚಿವ ಹರ್ಷವರ್ಧನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ವೇಳೆ ಮಾತನಾಡಿ, ಲಸಿಕೆಯನ್ನು ಎಲ್ಲಾ ನಾಗರಿಕರಿಗೆ ಉಚಿತವಾಗಿ ಲಸಿಕೆಯನ್ನು ನೀಡಲಾಗುವುದು ಎಂದು ಆಶ್ವಾಸನೆ ನೀಡಿದರು.