15 ಕೋಟಿ  ವೆಚ್ಚದಲ್ಲಿ ಕುಂದವಾಡ ಕೆರೆ ಅಭಿವೃದ್ಧಿ ಕಾಮಗಾರಿಗೆ ಸಂಸದ ಜಿ.ಎಂ ಸಿದ್ದೇಶ್ವರ್  ಚಾಲನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ:  ದಾವಣಗೆರೆ ನಗರಕ್ಕೆ ಕುಡಿಯುವ ನೀರು ಪೂರೈಸುವ  ಕುಂದವಾಡ ಕೆರೆಯನ್ನು ಸ್ಮಾರ್ಟ್‍ಸಿಟಿ ಯೋಜನೆಯಡಿ, 15 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವ ಕಾರ್ಯಕ್ಕೆ  ಸಂಸದ ಜಿ.ಎಂ. ಸಿದ್ದೇಶ್ವರ   ಚಾಲನೆ ನೀಡಿದರು.

ನಂತರ ಮಾತನಾಡಿದ ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಮಾತನಾಡಿ, ಕುಂದವಾಡ ಕೆರೆ ಏರಿಗೆ ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ಜನ ವಾಯುವಿಹಾರಕ್ಕೆ ಬರುತ್ತಾರೆ. ಇಲ್ಲಿನ ವಾತಾವರಣ ಆಹ್ಲಾದಕರವಾಗಿರಬೇಕು, ವಾಯುವಿಹಾರಿಗಳಿಗೆ ಅನುಕೂಲವಾಗುವಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದರು.

ಸ್ಮಾರ್ಟ್‍ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ ಮಾತನಾಡಿ,  ಕುಂದವಾಡ ಕೆರೆಯು ದಾವಣಗೆರೆ ನಗರದ ಕುಡಿಯುವ ನೀರಿನ ಪ್ರಮುಖ ಸಂಗ್ರಹಗಾರವಾಗಿದ್ದು, ಇತ್ತೀಚಿನ ದಿನಗಳಲ್ಲಿ ಕುಂದವಾಡ ಕೆರೆಯ ಏರಿಯ ಮೇಲೆ ಮತ್ತು ಕೆರೆಯಲ್ಲಿ ಬೆಳೆದಿರುವ ಸಾಕಷ್ಟು ಕಳೆ, ಹೂಳು ಇತ್ಯಾದಿಗಳಿಂದ ಬೇಸಿಗೆಯಲ್ಲಿ ನೀರು ಹಸಿರು ಬಣ್ಣಕ್ಕೆ ತಿರುಗಿ ಉಪಯೋಗಿಸಲು ಸಾಧ್ಯವಾಗುತ್ತಿಲ್ಲ. ಕೆರೆಯ ಮುಖ್ಯ ಏರಿಯಲ್ಲಿ ನೀರು ಸೋರಿಕೆಯಾಗುತ್ತಿತ್ತು, ಈ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಕೆರೆಯ ಒಟ್ಟು 4.90 ಕಿ.ಮೀ. ಉದ್ದದ ಏರಿಯನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ಕೆರೆ ಏರಿ ಆವರಣದಲ್ಲಿ ಬೆಳೆದಿರುವ ಪೊದೆ, ಮುಳ್ಳನ್ನು ತೆರವುಗೊಳಿಸಿ, ಕೆರೆ ಏರಿಯನ್ನು ಎತ್ತರಿಸಲಾಗುವುದು ಅಲ್ಲದೆ ವಿಸ್ತರಿಸಲಾಗುವುದು. ಕೆರೆಯ ಒಳಮುಖದ ಇಳಿಜಾರಿನ ರಕ್ಷಣಾ ಕಾರ್ಯ ಕೈಗೊಳ್ಳಲಾಗುವುದು. ಪಾದಚಾರಿಗಳ ವಾಕಿಂಗ್ ಪಥ ರಚಿಸಿ, ಆರ್ಕಿಟೆಕ್ಚರಲ್ ಫೆನ್ಸಿಂಗ್ ಮಾಡಲಾಗುವುದು. ಸಾಧರಹಳ್ಳಿ ಕಲ್ಲಿನ ಆಸನಗಳು ಮತ್ತು ಇತರೆ ಅಲಂಕಾರಿಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಸ್ಥಿರವಾದ ಪಾಲಿಥಿಲಿನ್ ಡಸ್ಟ್‍ಬಿನ್‍ಗಳ ಅಳವಡಿಕೆ, ವಿದ್ಯುತ್ ಕಂಬ ಹಾಗೂ ದೀಪಗಳನ್ನು ಅಳವಡಿಸುವಂತಹ ಅಭಿವೃದ್ಧಿ ಕಾಮಗಾರಿ ನಡೆಸಲಾಗುವುದು. ಕಾಮಗಾರಿ ಪೂರ್ಣಗೊಳಿಸಲು ಒಂದು ವರ್ಷದ ಕಾಲಮಿತಿ ನಿಗದಿಪಡಿಸಲಾಗಿದೆ ಎಂದರು.

ಶಾಸಕ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎ. ರವೀಂದ್ರನಾಥ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *