ಬೆಂಗಳೂರು: ಪದೇ ಪದೇ ನಾಯಕತ್ವ ಬದಲಾವಣೆ ಬಗ್ಗೆ ಹೇಳಿಕೆ ನೀಡುತ್ತಿದ್ದ ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊನೆಗೂ ಸಿಎಂ ಯಡಿಯೂರಪ್ಪ ಕರೆದ ಸಭೆಗೆ ಹಾಜರಾಗಿದ್ದಾರೆ.
ಮಾತಿನ ಮೂಲಕ ಸಿಎಂಗೆ ಟಕ್ಕರ್ ನೀಡುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್- ಸಿಎಂ ಯಡಿಯೂರಪ್ಪ ಇಂದು ಮುಖಾಮುಖಿಯಾಗಿದ್ದಾರೆ. ಅನುದಾನ ಹಂಚಿಕೆಯಲ್ಲಿ ಸಿಎಂ ವಿರುದ್ಧ ಯತ್ನಾಳ್ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಸಂಕ್ರಾಂತಿ ನಂತರ ಸಿಎಂ ಬದಲಾವಣೆ ಆಗಲಿದೆ ಎಂದು ಹೇಳಿಕೆ ನೀಡುವ ಮೂಲಕ, ಸಿಎಂ ಯಡಿಯೂರಪ್ಪಗೆ ನೇರವಾಗಿ ಟಕ್ಕರ್ ನೀಡಿದ್ದರು.



