ಬೆಂಗಳೂರು: ಮೈತ್ರಿ ಯೋಜನೆಯಡಿ ಅರ್ಚಕ, ಪುರೋಹಿತರನ್ನು ಮದುವೆಯಾಗಲು ಬಯಸುವ ವಧುವಿಗೆ ರಾಜ್ಯ ಸರ್ಕಾರಿಂದ 3 ಲಕ್ಷ ಬಾಂಡ್ ಸಿಗಲಿದೆ ಎನ್ನಲಾಗಿದೆ ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ಎಚ್. ಸಚ್ಚಿದಾನಂದ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಗಳಿಗೆ ಮಾಹಿತರಿ ನೀಡಿದ ಅವರು, ಪೌರೋಹಿತ್ಯ ವೃತ್ತಿ ಮಾಡುವವರನ್ನು ಮದುವೆಯಾಗುವುದಕ್ಕೆ ಹೆಣ್ಣಿನ ಕಡೆಯವರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ವಧುವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು, ನಾಳೆ ಈ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಚಾಲನೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.
ಬಡ ಹೆಣ್ಣುಮಕ್ಕಳ ಮದುವೆಗೆ 25 ಸಾವಿರ ರು, ಐದು ಎಕರೆಗಿಂತ ಕಡಿಮೆ ಜಮೀನು ಹೊಂದಿರುವವರಿಗೆ ಬೋರ್ವೆಲ್, ಟ್ರ್ಯಾಕ್ಟರ್ ಖರೀದಿ ಮತ್ತು ಹೈನುಗಾರಿಕೆಗೆ ಧನ ಸಹಾಯ ನೀಡಲಾಗುತ್ತಿದೆ ಎಂದು ತಿಳಿಸಿದರು.



