ಸಾರ್ವಜನಿಕರು ರಸ್ತೆ ಅಗೆಯುವ ಮುನ್ನ ಲೋಕೋಪಯೋಗಿ ಇಲಾಖೆ ಅನುಮತಿ ಕಡ್ಡಾಯ, ತಪ್ಪಿದಲ್ಲಿ ಕೇಸ್ ದಾಖಲು: ಡಿಸಿಎಂ ಗೋವಿಂದ್ ಕಾರಜೋಳ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ : ಸಾರ್ವಜನಿಕರು ರಸ್ತೆಗಳನ್ನು ಅಗೆಯುವ ಮುನ್ನ ಇಲಾಖೆಯ ವತಿಯಿಂದ ಅನುಮತಿ ಪಡೆಯಬೇಕು. ಒಂದು ವೇಳೆ ಅನುಮತಿ ಪಡೆಯದೇ ರಸ್ತೆ ಅಗೆದರೆ ಅಂತಹವರ ವಿರುದ್ದ ಮೊಕದ್ದಮೆ ದಾಖಲಿಸಿ ಎಫ್‍ಐಆರ್ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಹೇಳಿದರು.

ಗುರುವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ನಡೆದ ಲೋಕೋಪಯೋಗಿ ಇಲಾಖೆಯ ದಾವಣಗೆರೆ ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಲೋಕೋಪಯೋಗಿ  ಇಲಾಖೆಯ ಒಡೆತನದಲ್ಲಿರುವ ಹಲವು ಪ್ರವಾಸಿ ಮಂದಿರಗಳಲ್ಲಿ ನಿರ್ವಹಣೆ ಇಲ್ಲವಾಗಿದೆ. ಕೆಲೆವೆಡೆ ಸಿಬ್ಬಂದಿ ಕೊರತೆಯಿಂದ ಕಸ ಗುಡಿಸುವವರೂ ಇಲ್ಲ. ಹಾಗಾಗಿ ಇಲಾಖೆಯ ಪ್ರವಾಸಿ ಮಂದಿರಗಳನ್ನು ಪ್ರವಾಸೋದ್ಯಮ ಇಲಾಖೆಯ ವ್ಯಾಪ್ತಿಗೆ ನೀಡುವ ಕುರಿತು ಚಿಂತನೆ ನಡೆಸಲಾಗುವುದು ಎಂದರು.

ಬಹಳಷ್ಟು ಇಲಾಖೆಗಳು ರಸ್ತೆ, ಚರಂಡಿ ಕಾಮಗಾರಿಗಳಿಗೆ ಹಣ ನೀಡುವುದರಿಂದ ಕಾಮಗಾರಿಗಳು ಆದ ಕಡೆಯಲ್ಲಿಯೇ ಮತ್ತೆ ಮತ್ತೆ ಆಗುವುದರಿಂದ ಪ್ರಯೋಜನವಿಲ್ಲ. ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್, ಜಿ.ಪಂ, ಸಣ್ಣ ನೀರಾವರಿ ಮುಂತಾದ ಇಲಾಖೆಗಳು ಹಣ ನೀಡುವುದರಿಂದ ಕಾಮಗಾರಿಗಳು ಪುನರಾವರ್ತಿತವಾಗುತ್ತಿವೆ. ಆದ ಕಾರಣ ಇನ್ನು ಮುಂದೆ ಅಂಗನವಾಡಿಗಳು, ಶಾಲಾ ಕಟ್ಟಡಗಳು ಮತ್ತು ಸಮುದಾಯ ಭವನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದರು.

ಬಹುತೇಕ ಎಸ್‍ಸಿ/ಎಸ್‍ಟಿ ಕಾಲೋನಿಗಳಲ್ಲಿ ಅವರ ಮನೆಗಳ ಮುಂದಿನ ರಸ್ತೆಯು ಮನೆ ಬಾಗಿಲಿಗಿಂತ ಒಂದರಿಂದ ಎರಡು ಅಡಿ ಎತ್ತರವಿರುತ್ತದೆ. ಹಾಗಾಗಿ ಮಳೆ ನೀರು ಮನೆ ಒಳಗೆ ನುಗ್ಗುತ್ತಿದೆ. ಆದ ಕಾರಣ ಕೇವಲ ರಸ್ತೆ ಕಾಮಗಾರಿಗಳಿಗೇ ಹಣ ವಿನಿಯೋಗಿಸುವ ಬದಲು, ಲಭ್ಯವಿರುವ ಸ್ಥಳಗಳಲ್ಲಿ ಉದ್ಯೋಗ ಸೃಜನೆಯಾಗುವಂತಹ ಹಾಗೂ ಇಲಾಖೆಗೆ ಶಾಶ್ವತ ಆಸ್ತಿಯಾಗುವಂತಹ ಪುಟ್ಟ ಪುಟ್ಟ ಅಂಗಡಿ, ಮಳಿಗೆಗಳನ್ನು ನಿರುದ್ಯೋಗಿಗಳಿಗೆ ನಿರ್ಮಿಸಿಕೊಟ್ಟಲ್ಲಿ ಅವರಿಗೆ ಉದ್ಯೋಗ ದೊರಕಿಸಿಕೊಟ್ಟಾಂಗುತ್ತದೆ ಎಂದರು.

ಜಿಲ್ಲೆಯ ಪ್ರಮುಖ ರಸ್ತೆಗಳಲ್ಲಿ ನಾಮಫಲಕಗಳು ಕಂಡು ಬರುತ್ತಿಲ್ಲ. ಸ್ಟೀಲ್ ಅಥವಾ ಕಬ್ಬಿಣದ ನಾಮಫಲಕಗಳನ್ನು ಹಾಕುವುದರಿಂದ ಅವುಗಳನ್ನು ಅಪಹರಿಸಿಕೊಂಡು ಹೋಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಸಿಮೆಂಟಿನ ಅಚ್ಚಿನಲ್ಲಿ ತಯಾರಿಸಿರುವ ನಾಮಫಲಕಗಳನ್ನು ಹಾಕಿದರೆ ಸಣ್ಣ ಪುಟ್ಟ ರಿಪೇರಿ ಬಂದರೆ ಮಾಡಿಸಿಕೊಳ್ಳಬಹುದು ಎಂದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *