Connect with us

Dvgsuddi Kannada | online news portal | Kannada news online

ದುಗ್ಗಾವತಿ ಮದ್ಯ ತಯಾರಿಕ ಘಟಕಕ್ಕೆ ಬೆಂಕಿ; ಮೂವರ ಸ್ಥಿತಿ ಗಂಭೀರ ; ಒಬ್ಬ ಕಾರ್ಮಿಕ ಸಾವು

ಪ್ರಮುಖ ಸುದ್ದಿ

ದುಗ್ಗಾವತಿ ಮದ್ಯ ತಯಾರಿಕ ಘಟಕಕ್ಕೆ ಬೆಂಕಿ; ಮೂವರ ಸ್ಥಿತಿ ಗಂಭೀರ ; ಒಬ್ಬ ಕಾರ್ಮಿಕ ಸಾವು

ಹಪನಹಳ್ಳಿ: ದಾವಣಗೆರೆ ಸಮೀಪ ಬಳ್ಳಾರಿ ತಾಲ್ಲೂಕಿನ ದುಗ್ಗಾವತಿಯಲ್ಲಿರುವ ಮಾಜಿ ಶಾಸಕ ಎಸ್‌.ಎಸ್. ಮಲ್ಲಿಕಾರ್ಜುನ ಅವರ ಒಡೆತನದ ಮದ್ಯ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ದುಗ್ಗಾವತಿ ಸಕ್ಕರೆ ಕಾರ್ಖಾನೆಯಲ್ಲಿ ಮದ್ಯ ತಯಾರಿಕ ಘಟಕವಾದ ಜಾನ್ ಡಿಸ್ಟಿಲರೀಸ್ ಗೆ ಸೇರಿದ ಕೇಂದ್ರದಲ್ಲಿ ಈ ಅವಘಡ ನಡೆದಿದೆ. ಬೆಳಿಗ್ಗೆ ಟ್ಯಾಂಕರ್ ವೈಲ್ಡಿಂಗ್ ಕಾರ್ಯದಲ್ಲಿ ತೊಡಗಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಒಳಗಡೆ ಅನೇಕ ಕಾರ್ಮಿಕರು ಕೆಲಸ ಮಾಡುತ್ತಿದ್ದರು.

whatsapp image 2021 01 08 at 121459 pm1610089356

ಆಲ್ಕೋಹಾಲ್ ತಯಾರಿಕಾ ಘಟಕವಾಗಿದ್ದರಿಂದ ಬೆಂಕಿ ಬೇಗನೇ ಇಡೀ ಘಟಕ್ಕೆ ವ್ಯಾಪಿಸಿತು. ಸಾಕಷ್ಟು ಪ್ರಮಾಣದ ಮದ್ಯದ ಬಾಟೆಲ್‌ಗಳನ್ನು ಗೋದಾಮಿನಲ್ಲಿ ದಾಸ್ತಾನು ಮಾಡಲಾಗಿದ್ದು, ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜು ಮಾಡಲಾಗಿದೆ.

IMG 20210108 WA0004

ಸ್ಥಳಕ್ಕೆ ಹರಪನಹಳ್ಳಿ, ಹರಿಹರ ಮತ್ತು ದಾವಣಗೆರೆಯ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ತಹಶೀಲ್ದಾರ್ ಎಲ್.ಎಂ.ನಂದೀಶ್  ಭೇಟಿ ನೀಡಿ ಪರಿಶೀಲಿಸಿದರು. ಹಲುವಾಗಲು ಪೊಲೀಸ್ ಠಾಣೆ ಪೊಲೀಸರು ಸ್ಥಳದಲ್ಲಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top