ಪರಿಸರ ಸಂರಕ್ಷಣೆ  ಜಾಗೃತಿ ಅಗತ್ಯ: ಶ್ರೀ ಬಸವಪ್ರಭು ಸ್ವಾಮೀಜಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿಸುದ್ದಿ.ಕಾಂ, ಹರಿಹರ:  ಪರಿಸರ ರಕ್ಷಣೆ, ಮಳೆ ನೀರು ಶೇಖರಣೆ ಜತೆ ಅಂತರ್ಜಲ ಮಟ್ಟ ಹೆಚ್ಚಿಸು ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿದರು.

ನಗರದ ವಿದ್ಯಾನಗರದಲ್ಲಿ ಮಾಜಿ ಅರೆಸೈನಿಕರ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮ ಸಾನಿಧ್ಯವಹಿಸಿ ಮಾತನಾಡಿದ ಅವರು, ಸಂಘಟನೆ ಮೂಲಕ  ಬಡವರ, ನೊಂದವರ, ಶೋಷಿತರ ಸೇವೆ  ಮಾಡುವಕಾರ್ಯ ಶ್ಲಾಘನೀಯ . ಇದೇ ರೀತಿ  ನಿಮ್ಮ ಸಮಾಜ ಸೇವೆ ಮುಂದುವರಿಯಲ್ಲಿ ಎಂದು ಆಶೀರ್ವದಿಸಿದರು.

ದೇಶ ಗಡಿ ಕಾಯುವ ಸೇನೆಯಲ್ಲಿ ನಿವೃತ್ತಿಯಾದ ನಂತರ ಸಮಾಜ ಸೇವೆಗೆ  ಒಟ್ಟುಗೂಡಿರುವುದು ಸಂತಸ ಸಂಗತಿ. ನಿಮ್ಮ  ಈ ಸೇವೆ ಇತರೆ ವರ್ಗದವರಿಗೂ ಮಾದರಿಯಾಗಲಿದೆ. ಸಮಾಜದ ಒಳಿತಿಗಾಗಿ ಎಲ್ಲರು ಒಟ್ಟಾಗಿ ಶ್ರಮಿಸಿದಾಗ ಬದಲಾವಣೆ  ಸಾಧ್ಯ ಎಂದು ತಿಳಿಸಿದರು.

ನಿವೃತ್ತಿ ನಂತರ  ಮನೆಯಲ್ಲಿ ವಿಶ್ರಾಂತಿ ಜೀವನ ನಡೆಸುವವರೇ ಹೆಚ್ಚು. ಇಂತಹ ಕಾಲದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು. ಕನ್ನಡ ಭಾಷೆಯ ಉಳಿವಿಗಾಗಿ  ಜಾಗೃತಿ ಮೂಡಿಸುತ್ತಿರುವುದು ಒಳ್ಳೆಯ ಸಂಗತಿ ಎಂದರು

ಶಾಸಕ ಎಸ್ ರಾಮಪ್ಪ ಮಾತನಾಡಿ, ಸಮಾಜ ಸೇವೆಯೇ ಮುಖ್ಯ ಗುರುಯಾಗಿರಿಸಿ ಕೊಂಡಿರುವ ಈ ಸಂಸ್ಥೆಗೆ ಒಂದು ಸ್ವಂತ ಕಟ್ಟಡದ ಅವಶ್ಯಕತೆಯಿದ್ದು, ಕಟ್ಟಡ ನಿರ್ಮಾಣ ಮಾಡಿ ಕೊಡುತ್ತೇನೆ ಎಂದು ಭರವಸೆ ನೀಡಿದರು.

ಸಂಸ್ಥೆಯ ಅಧ್ಯಕ್ಷ  ಹೆಚ್.ಬಸವರಾಜ್‌,  ಕಾರ್ಯದರ್ಶಿ ಎಂ.ಗಂಗಾಧರ್ , ಉಪಾಧ್ಯಕ್ಷ  ಪಿ.ಮಂಜುನಾಥ, ಖಜಾಂಚಿ ಅರುಣ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *