ಸಿಡಿದೆದ್ದ ಯತ್ನಾಳ್: ಸಿಡಿ  ಬ್ಲ್ಯಾಕ್ ಮೇಲ್, ಹಣ ನೀಡಿದವರಿಗೆ  ಸಚಿವ ಸ್ಥಾನ ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ವಿಜಯಪುರ‌:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ನನ್ನ ಬೆಂಬಲ ಕೋರಿದ್ದ ಮೂವರು ಇದೀಗ ಸಿ.ಡಿ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿ, ಹಣ ನೀಡಿ ಸಚಿವ ಸ್ಥಾನ ಪಡೆದುಕೊಂಡಿದ್ದಾರೆ ಎಂದು  ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಗಂಭೀರವಾಗಿ ಆರೋಪಿಸಿದ್ದಾರೆ.

ಇಂದು ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ತಮಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಅಸಮಧಾನ ಹೊರ ಹಾಕಿದ ಯತ್ನಾಳ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಕುತಂತ್ರ ನಡೆಸಿ ಬ್ಲ್ಯಾಕ್ ಮೇಲ್ ಮಾಡಿದ ಮೂವರು ಇದೀಗ ಸಚಿವ ಸ್ಥಾನ‌ ಪಡೆದಿದ್ದಾರೆ. ಇದೇ ಮೂವರು ಈ ಹಿಂದೆ ನನ್ನ ಭೇಟಿಯಾಗಿದ್ದರು. ನಾವೆಲ್ಲರೂ ಒಗ್ಗೂಡಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸೋಣ, ನಮಗೆ ಬೆಂಬಲ ನೀಡಿ ಎಂದು ಕೋರಿದ್ದರು.ಅವರ ಮಾತು ಕೇಳಿ ನನಗೆ ಆಶ್ಚರ್ಯವಾಗಿತ್ತು. ಈಗಲೂ ಅಷ್ಟೇ ಅಚ್ಚರಿಯಾಗಿದೆ ಎಂದ ಯತ್ನಾಳ, ಆದರೆ ಬ್ಲ್ಯಾಕ್ ಮೇಲ್ ಮಾಡಿದ ಮೂವರಲ್ಲಿ ಯಾರೊಬ್ಬರ ಹೆಸರು ಹೇಳದೇ ವಾಗ್ದಾಳಿ ನಡೆಸಿದರು.

ಹಣ ನೀಡಿದವರಿಗೆ, ಬ್ಲ್ಯಾಕ್ ಮೇಲ್ ಮಾಡಿದವರಿಗೆ ಸಚಿವ ಸ್ಥಾನ ಸಿಕ್ಕಿದೆ. ಕೆಲವರು ಸಿಡಿ ತೋರಿಸಿ ಯಡಿಯೂರಪ್ಪ ಅವರನ್ನು ಹೆದರಿಸಿ ಸಚಿವರಾಗಿದ್ದಾರೆ. ಇನ್ನು ಕೆಲವರು ಅಪಾರ ಪ್ರಮಾಣದ ಹಣ ನೀಡಿ ಸಚಿವರಾಗಿದ್ದಾರೆ ಎಂದು ದೂರಿದರು.

ಮುಖ್ಯಮಂತ್ರಿ ಯಡಿಯೂರಪ್ಪ ವೀರಶೈವ-ಲಿಂಗಾಯತ ಸಮಾಜದ ಮರ್ಯಾದೆಯನ್ನ ಕಳೆದಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಹೊರಬರಲಿ ಎಂದು ಸವಾಲು ಹಾಕಿದರು.

ವೀರಶೈವ ಲಿಂಗಾಯತ ಮಠಗಳಿಗೆ ಹಣ ನೀಡಿರುವ ಯಡಿಯೂರಪ್ಪ, ಅಧಿಕಾರದಿಂದ ತಮ್ಮನ್ನು ಕೆಳಗೆ ಇಳಿಸಿದರೆ ತಮ್ಮಿಂದ ಹಣ ಪಡೆದ ಮಠಗಳು ಕೇಂದ್ರದ ವಿರುದ್ಧ ಬಂಡೇಳುವಂತೆ ಯೋಜನೆ ರೂಪಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಸಂಕ್ರಮಣದ ಉತ್ತರಾಯಣದ ಮೂಲಕ ಸಿಎಂ ಯಡಿಯೂರಪ್ಪ ಅವರ ರಾಜಕೀಯ ಅಧಪತನ ಆರಂಭವಾಗಿದೆ, ಕಾದು ನೋಡಿ ಎಂದು ಭವಿಷ್ಯ ನುಡಿದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *