ಮಿತ್ರ ಮಂಡಳಿ ವಿರುದ್ಧ ಗುಡುಗಿದ ಶಾಸಕ ಮುನಿರತ್ನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಸಚಿವ ಸ್ಥಾನ ನನ್ನ ಹಣೆಯಲ್ಲಿ ಬರೆದಿದ್ದರೆ ಸಿಗುತ್ತದೆ.  ಇಲ್ಲ ಅಂದ್ರೆ ಇಲ್ಲ. ಕೇವಲ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ ಎಂದು ಶಾಸಕ ಮುನಿರತ್ನ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಜೊತೆಗೆ ಬಂದವರು ಎಲ್ಲಾ ಬ್ಯುಸಿಯಾಗಿದ್ದಾರೆ. ಯಾರಿಗೂ ಮಾತಾಡುವುದಕ್ಕೆ ಸಮಯವಿಲ್ಲ.  ಯಡಿಯೂರಪ್ಪ ವಚನ ಭ್ರಷ್ಟ ಅಲ್ಲ, ಮಾತು ತಪ್ಪಲಿಲ್ಲ.ಕೆಲವು ಸಂದರ್ಭಗಳಲ್ಲಿ ಹೀಗೆ ಆಗುತ್ತದೆ. ಮುಖ್ಯಮಂತ್ರಿ ವಿರುದ್ಧ ಮಾತನಾಡಿದರೆ ಪಕ್ಷಕ್ಕೆ ಕೆಟ್ಟದು ಮಾಡಿದ ಹಾಗೆಯಾಗುತ್ತದೆ. ಸಚಿವ ಸ್ಥಾನ ಸಿಗಲಿಲ್ಲ ಎಂದು ಕೆಟ್ಟದಾಗಿ ಮಾತನಾಡಲ್ಲ. ನಮ್ಮದು ರಾಷ್ಟ್ರೀಯ ಪಕ್ಷ. ಅಲ್ಲಿಂದ ಒಪ್ಪಿಗೆ ಬರುವುದು ವಿಳಂಬವಾಗಿರಬಹುದು ಎಂದು ತಿಳಿಸಿದರು.

ನಾನು ನನ್ನ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ. ಜನರ ಹೃದಯದಲ್ಲಿ ಸ್ಥಾನ ಪಡೆದಿದ್ದೇನೆ.  ಸಿಡಿ ಇದ್ದರೆ ತೋರಿಸಲಿ, ಸುಮ್ಮನೆ ಆಧಾರ ರಹಿತವಾಗಿ ಮಾತಾಡಬಾರದು.  ಪಕ್ಷಕ್ಕೆ ಮುಜುಗರ ತರುವ ಕೆಲಸ ಯಾರೂ ಮಾಡಬಾರದು ಎಂದರು.

ನಾನು ದೇವರನ್ನು ನಂಬುವ ಮನುಷ್ಯ. ದೇವರು ಇದ್ದಾನೆ ಎನ್ನುವ ಧರ್ಮದಲ್ಲಿ ಹುಟ್ಟಿದ್ದೇನೆ. ಸರ್ಕಾರ ಸುಭದ್ರವಾಗಿದೆ, ಇನ್ನೂ ಎರಡಡು ವರ್ಷ ಇರುತ್ತದೆ. ಯಾವುದೇ ತೊಂದರೆಯಾಗಲ್ಲ.  ಸಚಿವ ಸ್ಥಾನ ಇಲ್ಲ ಅಂತ ಚಿಂತೆ ಇಲ್ಲ. ಅರುಣ್ ಸಿಂಗ್ ಬಳಿ ನನಗೆ ಸಚಿವ ಸ್ಥಾನ ಬೇಕು ಎಂದೂ ಕೇಳಿಲ್ಲ. ಬೇರೆಯವರಿಗೂ ನಮಗೂ ಹೋಲಿಕೆ ಮಾಡಿಕೊಳ್ಳಬಾರದು. ಕೆಲವು ಸಂದರ್ಭಗಳಲ್ಲಿ ಕೆಟ್ಟ ಸಮಯ ಬರುತ್ತದೆ ಎನೂ ಮಾಡುವುದಕ್ಕೆ ಆಗುವುದಿಲ್ಲ ಎಂದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *