ದುರ್ಬಲ ಮುಖ್ಯಮಂತ್ರಿಗೆ ಮಾತ್ರ ಬ್ಲ್ಯಾಕ್ ಮೇಲ್ ಮಾಡಲು ಸಾಧ್ಯ: ಸಿದ್ದರಾಮಯ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಮೈಸೂರು: ಸಿಎಂ ವಿರುದ್ಧ ಸಿಡಿ  ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಬೇಕು. ಎಲ್ಲರಿಗೂ ಬ್ಲ್ಯಾಕ್ ಮೇಲ್ ಮಾಡೋಕೆ ಆಗಲ್ಲ. ದುರ್ಬಲ ಮುಖ್ಯಮಂತ್ರಿಗೆ ಮಾತ್ರ ಬ್ಲ್ಯಾಕ್ ಮೇಲ್ ಮಾಡ್ತಾರೆ. ಅದರ ಬಗ್ಗೆ ಕ್ರಿಮಿನಲ್ ಕೇಸ್ ಹಾಕಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ  ಹೇಳಿದರು.

ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಇಷ್ಟು ದಿನಗಳ ಕಾಲ ಮಂತ್ರಿಮಂಡಲ ವಿಸ್ತರಣೆ ಯಾಕೆ ಮಾಡಿರಲಿಲ್ಲ. ಮಂತ್ರಿಮಂಡಲ ವಿಸ್ತರಣೆಗೆ ಯಾಕೆ ತಡವಾಯ್ತು? ಗೋಗರೆದು ಕೈಕಾಲು ಕಟ್ಟಿ ಮಂತ್ರಿಮಂಡಲ ವಿಸ್ತರಣೆ ಮಾಡಿಸಿಕೊಂಡಿದ್ದಾರೆ ಎಂದು ಕಿಡಿಕಾರಿದರು.

ಒಬ್ಬ ಸಚಿವನನ್ನು ಸಂಪುಟದಿಂದ ಬಿಟ್ಟಿದ್ದಾರೆ, ಯಾವ ಕಾರಣಕ್ಕೆ ಬಿಟ್ಟಿದ್ದಾರೆ ಎಂದು ಕಾರಣ ಕೊಟ್ಟಿಲ್ಲ. ಪಕ್ಷೇತರನಾಗಿ ಕಾಂಗ್ರೆಸ್ ಪಕ್ಷದ ಸಹಾಯದೊಂದಿಗೆ ಗೆದ್ದಿದ್ದ ಪಕ್ಷೇತರ ಶಾಸಕ ಎಚ್.ನಾಗೇಶ್ ರನ್ನು ಯಾಕೆ ಕೈಬಿಟ್ಟಿದ್ದಾರೆ? ಅವರನ್ನು ಯಾವ ಕಾರಣಕ್ಕೆ ಡ್ರಾಪ್ ಮಾಡಿದ್ದಾರೆ ಎಂದು ಹೇಳಿಲ್ಲ. ಅವರು ಕೂಡ ಆಪರೇಷನ್ ಕಮಲಕ್ಕೆ ಒಳಪಟ್ಟವರು. ಮುನಿರತ್ನನನ್ನು ಕೈ ಬಿಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮಿನಿಸ್ಟರ್ ಮಾಡಲು ಆಗಲಿಲ್ಲ ಎಂದಮೇಲೆ ಯಾಕೆ ತಗೆದುಕೊಂಡರು? ಕಾನೂನು ತೊಡಕಿದೆ ಎಂದು ಗೊತ್ತಿದ್ದರೂ ಯಾಕೆ ಕರೆದುಕೊಂಡರು. ಎಚ್.ವಿಶ್ವನಾಥ್ ಪಾಪ ಬಾಯಿ ಬಡ್ಕೊತ್ತಿದ್ದಾನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ ಮಾಡಿದರು.ಸಿಡಿ ವಿಚಾರ ಬಗ್ಗೆ ಆ ಪಕ್ಷದವರೆ ಆರೋಪ ಮಾಡಿದ್ದಾರೆ. ನಾವೇನು ಆರೋಪ ಮಾಡ್ತಿಲ್ಲ, ಅದರಲ್ಲಿ ಸತ್ಯ ಇದೆ ಅಲ್ವಾ. ನಾವು ಮಾಡಿದರೆ ವಿರೋಧ ಪಕ್ಷದವರು ಅಂತಾರೆ. ಈಗ ಅವರೇ ಮಾಡಿದ್ದಾರೆಂದರು.

ಮುಖ್ಯಮಂತ್ರಿಗಳು ಬ್ಲ್ಯಾಕ್ ಮೇಲ್ ಗೆ ಒಳಗಾಗಿದ್ದಾರೋ ಅಥವಾ ಒತ್ತಡಕ್ಕೆ ಒಳಗಾಗಿದ್ದಾರೋ ಅನ್ನೋದು ನಂಗೆ ಗೊತ್ತಿಲ್ಲ. ಅದಕ್ಕೆಲ್ಲ ತನಿಖೆ ಮಾಡಿ ಅಂತ ಹೇಳಲ್ಲ, ಕ್ರಿಮಿನಲ್ ಕೇಸ್ ಕೊಡಲಿ ಎಂದು ಹೇಳುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿನಲ್ಲಿ ಕುಟುಂಬ ರಾಜಕಾರಣ ಬಗ್ಗೆ ಬಹಳ ಹಿಂದೆ ನಾನು ಹೇಳಿದ್ದೇನೆ. ಬಿಡಿಎ ಹಗರಣದಲ್ಲಿ 7 ಕೋಟಿ 40 ಲಕ್ಷ ಹಣ ಅವರ ಕುಟುಂಬದವರ ಖಾತೆಗೆ ಹೋಗಿದೆ, ಅದರ ಅರ್ಥ ಕುಟುಂಬ ರಾಜಕಾರಣ ಇದೆ ಅಂತ ಅಲ್ವಾ. ಈ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಜನರೇ ಉತ್ತರ ಕೊಡುತ್ತಾರೆ. ನನ್ನ ಕಾಲದಲ್ಲಿ ಜಾರಿಗೆ ತಂದಿದ್ದ ಎಲ್ಲ ಜನಪರ ಕೆಲಸಗಳನ್ನು ನಿಲ್ಲಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆದಿದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *