ಭೀಕರ ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದವರಿಗೆ ಪ್ರಧಾನಿ ಸಂತಾಪ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಧಾರವಾಡ: ಇಂದು ಬೆಳಗಿನಜಾವ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ದಾವಣಗೆರೆಯ 11 ಜನರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

davangere accident 4

ಟ್ವಿಟ್ ಮೂಲಕ ಸಂತಾಪ ಸೂ ಸೂಚಿಸಿದ ಪ್ರಧಾನಿ, ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾದವರ ಬಗ್ಗೆ ಸಂತಾಪ ಸೂಚಿಸುವೆ. ಈ ಸಂದರ್ಭದಲ್ಲಿ ದುಃಖತಪ್ತ ಕುಟುಂಬಗಳ ನೋವಿನಲ್ಲಿ ನಾನೂ ಭಾಗಿ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುವೆ ಎಂದಿದ್ದಾರೆ.

davangere accident 1

ಸಂಕ್ರಾಂತಿ ಹಬ್ಬ ಹಿನ್ನೆಲೆ ದಾವಣಗೆರೆಯಿಂದ ಗೋವಾಕ್ಕೆ ಪ್ರವಾಸ ತೆರಳುತ್ತಿದ್ಧ ಟೆಂಫೋ ಟ್ರಾವೆಲರ್ ಟಿಪ್ಪರ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ  11 ಮಂದಿ ಮೃತಪಟ್ಟು, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ಹೊರವಲಯದ ಇಟಿಗಟ್ಟಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಳಗಿನ ಜಾವ ನಡೆದಿದೆ. 18 ಜನ ಪ್ರಯಾಣ ಬೆಳೆಸುತ್ತಿದ್ದರು . ಅದರಲ್ಲಿ 16 ಮಂದಿ ಮಹಿಳೆಯರು ಇದ್ದರು.

davangere accident 3

 

ಗೋವಾ ಪ್ರವಾಸಕ್ಕೆ ತೆರಳಿದ್ದ ಎಲ್ಲರೂ ಒಂದೇ ಬ್ಯಾಚ್ ನ ಸ್ನೇಹಿತರಾಗಿದ್ದರು. ಎಲ್ಲರೂ ದಾವಣಗೆರೆಯ ವಿದ್ಯಾನಗರ ನಿವಾಸಿಗಳಾಗಿದ್ದರು.  ಜಗಳೂರಿನ ಮಾಜಿ ಶಾಸಕ ಗುರುಸಿದ್ಧನಗೌಡ ಸೊಸೆ ಕೂಡ ಸಾವನ್ನಪ್ಪಿದ್ದಾರೆ. ಇನ್ನು ಸ್ರೀ ರೋಗ ತಜ್ಞೆ ವೀಣಾ ಪ್ರಕಾಶ್ ಕೂಡ ಸಾವನ್ನಪ್ಪಿದ್ದಾರೆ. ಒಂದೇ ಕುಟುಂಬದ ತಾಯಿ-ಮಗಳು ಕೂಡ ಸಾವನ್ನಪ್ಪಿದ್ದಾರೆ.  ಘಟನೆಯಲ್ಲಿ 5 ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *