ಜ.19 ರಂದು ದಾವಣಗೆರೆಗೆ ಬರಲಿದೆ ಕುರುಬ ಸಮಾಜದ ಎಸ್ ಟಿ ಮೀಸಲಾತಿ ಹಕ್ಕೊತ್ತಾಯದ ಪಾದಯಾತ್ರೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕುರುಬ ಸಮಾಜಕ್ಕೆ ಎಸ್‍ಟಿ ಮೀಸಲಾತಿಗೆ ಕೇಂದ್ರ ಮತ್ತು ರಾಜ್ಯಕ್ಕೆ ಹಕ್ಕೊತ್ತಾಯಕ್ಕೆ ಆಗ್ರಹಿಸಿ ಹಮ್ಮಿಕೊಂಡಿರುವ ಪಾದಯಾತ್ರೆಯು ಜ.19 ರಂದು ಮಧ್ಯಾಹ್ನ 3 ಗಂಟೆಗೆ ತಾಲ್ಲೂಕಿನ ದೊಡ್ಡಬಾತಿಯಿಂದ ಪ್ರಾರಂಭಗೊಳ್ಳಲಿದೆ ಎಂದು ಸಮಾಜದ ಮುಖಂಡ, ಡೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಕ್ಕೆ ಸಂಜೆ 4 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ವರೆಗೂ ಡೊಳ್ಳುಗಳು, ಗೊರವರ ಕುಣಿತದ ಮೂಲಕ ಕುರುಬ ಸಮಾಜದ ಬುಡಕಟ್ಟು ಸಂಸ್ಕೃತಿಯನ್ನು ಪ್ರದರ್ಶನ ನಡೆಯಲಿದ್ದು, ಈ ವೇಳೆ ಪಾದಯಾತ್ರೆಯ ನೇತೃತ್ವ ವಹಿಸಿರುವ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀಗಳನ್ನು ದಾವಣಗೆರೆಗೆ ಸ್ವಾಗತಿಸಲಾಗುತ್ತದೆ ಎಂದು ತಿಳಿಸಿದರು.

ರಾತ್ರಿ ಬೀರಲಿಂಗೇಶ್ವರ ದೇವಾಲಯದಲ್ಲಿ ವಾಸ್ತವ್ಯ ಹೂಡಲಾಗುತ್ತದೆ.ನಂತರ ಜ.20 ರ ಬೆಳಿಗ್ಗೆ6 ಗಂಟೆಗೆ ಬೀರಲಿಂಗೇಶ್ವರ ದೇವಸ್ಥಾನದಿಂದ ಪಾದಯಾತ್ರೆ ಪ್ರಾರಂಭವಾಗಲಿದ್ದು, ಅಂದು ಬೆಳಿಗ್ಗೆ 9 ಗಂಟೆಗೆ ಹೊನ್ನೂರು ಗೊಲ್ಲರಹಟ್ಟಿಯಲ್ಲಿ ಜಾಗೃತಿ ಸಭೆ ನಡೆಸಲಾಗುತ್ತದೆ. ನಂತರ ಕೊಗ್ಗನೂರಿನಲ್ಲಿ ವಾಸ್ತವ್ಯ ಹೂಡಲಾಗುತ್ತದೆ ಎಂದು ತಿಳಿಸಿದರು.

ಪಾಯಾತ್ರೆಯೂ ದಾವಣಗೆರೆ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ ಮೂಲಕ ಬೆಂಗಳೂರು ತಲುಪಿ ಸಮಾಜಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ಎಸ್ಟಿ ಮೀಸಲಾತಿಗೆ ಒತ್ತಾಯಿಸಲಾಗುವುದು. ಈ ಪಾದಯಾತ್ರೆಯಲ್ಲಿ ದಾವಣಗೆರೆಯಿಂದ ಐದು ಸಾವಿರಕ್ಕೂ ಅಧಿಕ ಜನರ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದರು.

ಈ ಸಂದರ್ಭದಲ್ಲಿ ಮಾಜದ ಮುಖಂಡರಾದ ರಾಜು ಮೌರ್ಯ, ಶಿವಣ್ಣ ಮಾಸ್ಟರ್, ಸಿದ್ದಲಿಂಗಪ್ಪ, ಹಾಲೇಕಲ್ಲು ವೀರಣ್ಣ, ಘನರಾಜ್, ಚಂದ್ರು ದೀಟೂರು ಭಾಗವಹಿಸಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *