Connect with us

Dvgsuddi Kannada | online news portal | Kannada news online

ಸಿದ್ದರಾಮಯ್ಯ ಆರ್ ಎಸ್ ಎಸ್ ನಲ್ಲಿದ್ರಾ ..? ಸಂಘದ ಜವಾಬ್ದಾರಿ ನಿಮಗ್ಯಾಕೆ : ಕಟೀಲ್

ರಾಜಕೀಯ

ಸಿದ್ದರಾಮಯ್ಯ ಆರ್ ಎಸ್ ಎಸ್ ನಲ್ಲಿದ್ರಾ ..? ಸಂಘದ ಜವಾಬ್ದಾರಿ ನಿಮಗ್ಯಾಕೆ : ಕಟೀಲ್

ಬೆಳಗಾವಿ: ಸಿದ್ದರಾಮಯ್ಯ ಏನಾದ್ರೂ ಆರ್‌ಎಸ್‌ಎಸ್‌ನಲ್ಲಿ ಇದ್ರಾ..? ಸಂಘದ ಜವಾಬ್ದಾರಿ ನಿಮಗ್ಯಾಕೆ  ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.

ಏಪ್ರಿಲ್‌ ಬಳಿಕ ಬಿಎಸ್‌ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಗುತ್ತದೆ. ಇದು  ಆರ್‌ಎಸ್‌ಎಸ್‌ ಮೂಲಳಿಂದ ನನಗೆ ಮಾಹಿತಿ ಬಂದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ನಳಿನ್ ಕುಮಾರ್ ಕಟೀಲ್ ಮುಖ್ಯಮಂತ್ರಿ ಬದಲಾವಣೆ ವಿಚಾರ ಎಲ್ಲೂ ಪ್ರಸ್ತಾಪವಾಗಿಲ್ಲ ಎಂದು ಕಿಡಿಕಾರಿದರು.

ಗೋಮಾಂಸ ತಿನ್ನುವವರ ಜೊತೆಗೆ ಆರ್‌ಎಸ್‌ಎಸ್‌ ನಾಯಕರೂ ಮಾತನಾಡಲು ಸಾಧ್ಯವೇ..? ಸಿದ್ದರಾಮಯ್ಯ ಈ ಹಿಂದೆ ಏನಾದ್ರು ಆರ್‌ಎಸ್‌ಎಸ್‌ನಲ್ಲಿ ಇದ್ದರಾ ಅಥವಾ ಸಂಘದ ಜವಾಬ್ದಾರಿ ವಹಿಸಿದ್ರಾ ಎಂದರು. ಸಿದ್ದರಾಮಯ್ಯ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜೊತೆ ಫೋನ್‌ನಲ್ಲಿ ಮಾತನಾಡಿದ್ದಾರಾ..? ಸಿದ್ದರಾಮಯ್ಯ ಅವರನ್ನು ರಾಹುಲ್ ಗಾಂಧಿ ಕಾಂಗ್ರೆಸ್‌ನಿಂದ ಹೊರಗೆ ಇಟ್ಟಿದ್ದಾರೆ ಎಂದು ಟೀಕಿಸಿದರು.

ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ್‌ ಕೋರೆ ಮಾತನಾಡಿ, ಸಿದ್ದರಾಮಯ್ಯ ಅವರ ಆರ್‌ಎಸ್‌ಎಸ್‌ ಬೇರೆ ಇರಬಹುದು. ಆದರೆ, ಅಮಿತ್‌ ಶಾ ಅವರೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಟಾಂಗ್‌ ನೀಡಿದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top