ಬೆಂಗಳೂರು : ಆತ್ಮ ನಿರ್ಭರ ನನ್ನ ಯೋಜನೆಯಯಾಗಿದ್ದು, ಕೇಂದ್ರ ಸರ್ಕಾರ ನನ್ನ ಯೋಜನೆಯನ್ನು ಕಾಪಿ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಗೃಹ ಸಚಿವ ಅಮಿತ್ ಶಾ ಭಾಷಣ ನೋಡಿದೆ. ಭಾಷಣ ನೋಡಿ ನನಗೆ ನಗು ಬರುತ್ತಿತ್ತು. ಕೊಪ್ಪಳದಲ್ಲಿ ಆಟಿಕೆ ತಯಾರಿಕೆಗೆ ನಾನು ಯೋಜನೆ ತಂದಿದ್ದೆ.ಕಾಂಪೀಟ್ ವಿತ್ ಚೈನಾ ಯೋಜನೆ ತಂದಿದ್ದೆ. ಕೊಪ್ಪಳದಲ್ಲಿ ಆಟಿಕೆ ತಯಾರಿಕೆ ಕೇಂದ್ರ ತಂದಿದ್ದು ನಾನು. ಆದರೆ ಬಿಜೆಪಿ ನಿನ್ನೆ ಅಡಿಗಲ್ಲು ಹಾಕಿದ್ದಾರೆ. ಸೌನ್ಯಕ್ಕೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ. ಮಾನವೀಯತೆ ಇಲ್ಲದ ಸರ್ಕಾರ. ಇನ್ನೂ ಕಿಸಾನ್ ಸಮ್ಮಾನ್ ತೆಲಂಗಾಣದ ಮಾದರಿ ಅನುಕರಣೆಯಾಗಿದೆ ಎಂದರು.



