ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಧಮ್ ಇದ್ರೆ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಅಂತಾ ಘೋಷಿಸಲಿ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಸವಾಲು ಹಾಕಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಸಿದ್ದರಾಮಯ್ಯ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಿಗೆ ಧಮ್ ಇದ್ದರೆ, ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಲಿ. ಇಲ್ಲವೇ ಸಿದ್ದರಾಮಯ್ಯ ಬಾಯಿ ಮುಚ್ಚಿಸಲಿ ಎಂದರು.
ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಹುಚ್ಚರಾಗಿದ್ದಾರೆ. ಹೀಗಾಗಿ ದಿನಕ್ಕೊಂದು ಹೇಳಿಕೆ ಕೊಡುತ್ತಿದ್ದಾರೆ. ಈಶ್ವರಪ್ಪ ಮುಖ್ಯಮಂತ್ರಿ ಆಗಲು ಕುರುಬ ಎಸ್ಟಿ ಹೋರಾಟ ಮಾಡುತ್ತಿದ್ದಾರೆ. ನಾನು ಮುಖ್ಯಮಂತ್ರಿ ಆಗಬೇಕೊ ಬೇಡವೋ ಎನ್ನುವುದನ್ನು ಬಿಜೆಪಿ ನಿರ್ಧರಿಸಲಿದೆ ಎಂದು ತಿಳಿಸಿದರು.
ಎಸ್ಟಿ ಮೀಸಲಾತಿ ಪಾದಯಾತ್ರೆ ನಾನು ಮಾಡಿಸುತ್ತಿಲ್ಲ. ಕನಕನ ಗುರುಪೀಠದಿಂದ ನಡೆಯುತ್ತಿದೆ. ಸಿದ್ದರಾಮಯ್ಯ ತಾನು ಇಲ್ಲದೆ ಜನ ಸೇರಲ್ಲ ಎಂದುಕೊಂಡಿದ್ದರು. ಆದರೆ,ಈಗ ಜನ ನೋಡಿ ಈ ರೀತಿ ಮಾತನಾಡುತ್ತಿದ್ದಾರೆ. ಮನಸ್ಸು ಇದ್ದರೆ ಪಾದಯಾತ್ರೆಯಲ್ಲಿ ಭಾಗಿಯಾಗಿ ಇಲ್ಲದಿದ್ರೆ, ದೂರ ಉಳಿಯಲಿ. ಗೊಂದಲವಾದ ಹೇಳಿಕೆ ಕೊಡುವುದು ಬೇಡ ಎಂದರು.



