ಮೈಸೂರು : ಕುರುಬ ಸಮಾಜವನ್ನು ಎಸ್ ಟಿ ಗೆ ಸೇರಿಸುವ ವಿಚಾರದಲ್ಲಿ ಆರ್ ಎಸ್ಎಸ್ ಹಣ ನೀಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಮಾತನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಸಮಾಜದಿಂದ ನಿಮ್ಮನ್ನು ಬಹಿಷ್ಕರಿಸಬೇಕಾಗುತ್ತದೆ ಎಂದು ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಕೂಡಲೇ ಸ್ವಾಮೀಜಿ ಹಾಗೂ ಸಮುದಾಯದ ಕ್ಷಮೆಯನ್ನು ಕೇಳಿ, ತಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಸಮಾಜದಿಂದ ನಿಮ್ಮನ್ನು ಬಹಿಷ್ಕರಿಸಬೇಕಾಗುತ್ತದೆ. ನೀವು ಒಬ್ಬರೇ ಬುದ್ಧಿವಂತರಲ್ಲ. ನೀವು ಹಿಂದೆ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಸಮಾಜ, ಸ್ವಾಮೀಜಿಯವರ ಪಾತ್ರವೂ ಇದೆ. ಅದನ್ನು ನೀವು ಮರೆಯಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ.



