ಈ ವರ್ಷ1ರಿಂದ 5ನೇ ತರಗತಿ ಆರಂಭಿಸಲ್ಲ: ಎಸ್. ಸುರೇಶ್ ಕುಮಾರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಚಿತ್ರದುರ್ಗ: ಈ ವರ್ಷ ಒಂದರಿಂದ  ಐದನೇ ತರಗತಿ ಶಾಲೆಯನ್ನು ಆರಂಭಿಸುವುದಿಲ್ಲ.  ನಲಿಕಲಿ ಮತ್ತು ರೇಡಿಯೋ ಮೂಲಕ ಪಾಠ ಕಲಿಸಲಾಗುವುದು  ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವರು, ಶಾಲೆಗೆ ಹಾಜರಾತಿ ಕಡ್ಡಾಯವಿಲ್ಲ, ನಾವು ಈ ಸರಿ ಅದನ್ನು ಪರೀಕ್ಷೆಯ ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.ದ್ವಿತೀಯ ಪಿಯುಸಿ ಮತ್ತು 10 ತರಗತಿ ಮಕ್ಕಳಿಗೆ ದಿನ ಪೂರ್ತಿ ಶಾಲೆ ನಡೆಸಲು ಅನುಮತಿ ಕೋರಿದ್ದಾರೆ. ಪ್ರಥಮ ಪಿಯುಸಿ, ಎಂಟನೇ ತರಗತಿ ಹಾಗೂ ಒಂಬತ್ತನೆಯ ತರಗತಿಗಳನ್ನು ಆರಂಭಿಸಬೇಕಾಗಿದೆ. ಹಾಗಾಗಿ ತಾಂತ್ರಿಕ ಸಲಹಾ ಸಮಿತಿ ಜೊತೆ ಮಾತನಾಡಿ ನಂತರ ತೀರ್ಮಾನಿಸಲಾಗುವುದು ಎಂದರು.

ಶಾಲೆಗೆ ಕಡ್ಡಾಯವಾಗಿ ಬರಬೇಕು ಎನ್ನುವ ಶಾಲೆಗಳ ಬಗ್ಗೆ ಗಮನಕ್ಕೆ ಬರಬೇಕು, ಆಗ ಕ್ರಮ ತೆಗೆದುಕೊಳ್ಳುತ್ತೇವೆ. ಖಾಸಗಿ ಶಾಲಾ ಶುಲ್ಕ ಪಾವತಿ ಬಗ್ಗೆ ಶಿಕ್ಷಣ ಇಲಾಖೆ ಆಯುಕ್ತರು ಚರ್ಚಿಸಿದ್ದಾರೆ. ಚರ್ಚೆಯ ವರದಿ ನಮಗೆ ಇಂದು ಬಂದಿದೆ. ವರದಿಯನ್ನು ಪರಿಶೀಲಿಸಿ ಪೋಷಕರು ಮತ್ತು ಖಾಸಗಿ ಶಾಲಾ ಆಡಳಿತ ಮಂಡಳಿಗೆ ಅನ್ಯಾಯವಾಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.ಕೋವಿಡ್ ಲಾಕ್ ಡೌನ್ ಘೋಷಣೆ ಬಳಿಕ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿತ್ತು. ಈಗ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಿವೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *