ಶಿವಕುಮಾರ ಶ್ರೀಗಳ ಪುಣ್ಯ ಸ್ಮರಣೆ ದಿನವನ್ನು ದಾಸೋಹ ದಿನವನ್ನಾಗಿ ಘೋಷಣೆ: ಸಿಎಂ ಯಡಿಯೂರಪ್ಪ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ  ಮಾಡಿದ ಶ್ರೀ ಶಿವಕುಮಾರ ಸ್ವಾಮೀಜಿ ವಸ್ತುಸಂಗ್ರಹಾಲಯಕ್ಕೆ 10 ಕೋಟಿ ನೀಡಲಾಗುವುದು. ಜೊತೆಗೆ ಶ್ರೀಗಳ ಪುಣ್ಯಸ್ಮರಣೆ ದಿ‌ನವನ್ನು  ದಾಸೋಹ ದಿನವನ್ನಾಗಿ ಘೋಷಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು.

 ಶಿವಕುಮಾರ ಸ್ವಾಮೀಜಿ ಅವರ ಎರಡನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಶಿವಕುಮಾರ ಸ್ವಾಮೀಜಿಯವರನ್ನು ಭೇಟಿ ಆದಾಗ ನನ್ನ ಅವರ ಕೊಠಡಿಗೆ ಕರೆದುಕೊಂಡು ಹೋಗಿ ಸಲಹೆಗಳನ್ನು ಕೊಡುತ್ತಿದ್ದರು. ಶ್ರೀಗಳು ಯುಗಪುರುಷ ಬಸವಣ್ಣ ಅವರ ಕಾಯಕ ಮತ್ತು ದಾಸೋಹ ತತ್ವದಲ್ಲಿ ಪೂರ್ಣವಾಗಿ ತೊಡಗಿಸಿಕೊಂಡಿದ್ದರು ಎಂದರು.

ಅನ್ನ ಅರಿವು ದಾಸೋಹದ ಜತೆಗೆ ಶಿಕ್ಷಣ ಅಧ್ಯಾತ್ಮದಲ್ಲೂ ಬದುಕು ಸವೆಸಿದರು. ಎಲ್ಲ ಜಾತಿ ಧರ್ಮಗಳ ಜನರಿಗೂ ಶಿಕ್ಷಣ ಆಶ್ರಯ ನೀಡಿದರು. ಇಲ್ಲಿ ಕಲಿತವರು ದೇಶ ವಿದೇಶಗಳಲ್ಲಿ ಉನ್ನತ ಸ್ಥಾನ ಪಡೆದಿದ್ದಾರೆ. ಜೀವನದಲ್ಲಿ ನೀನು ಒಬ್ಬನೇ ಸಾಧಿಸಿ ಮೇಲೆ ಬರುವುದಕ್ಕಿಂತ 10 ಜನರನ್ನು ಮೇಲೆತ್ತು ಎಂದ ಸ್ವಾಮೀಜಿ ಅವರ ಮಾತು, ನಡೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ಬದುಕು ಕಟ್ಟಿಕೊಟ್ಟಿದೆ. ಸ್ವಾಮೀಜಿ ಭೌತಿಕವಾಗಿ ಇಲ್ಲ ಅಷ್ಟೇ. ಅವರ ಕೆಲಸ ಜೀವಂತ. ಸಿದ್ಧಲಿಂಗ ಸ್ವಾಮೀಜಿ ಅವರೂ ಶಿವಕುಮಾರ ಸ್ವಾಮೀಜಿ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಮ್ಮನ್ನು ಮುನ್ನಡೆಸುತ್ತಿದ್ದಾರೆ, ನನ್ನ ದಿನಚರಿ ಆರಂಭದ ಆಗುವುದೇ ಶಿವಕುಮಾರ ಸ್ವಾಮೀಜಿ ಅವರ ಸ್ಮರಣೆಯೊಂದಿಗೆ ಎಂದು ಸ್ಮರಿಸಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *