ನವದೆಹಲಿ: ಆಯೋಧ್ಯೆ ರಾಮಮಂದಿರ ನಿರ್ಮಾಣಕ್ಕಾಗಿ ಬಿಜೆಪಿ ಸಂಸದ ಹಾಗೂ ಕ್ರಿಕೆಟರ್ ಗೌತಮ್ ಗಂಭೀರ್ ಅವರು ಒಂದು ಕೋಟಿ ರು ದೇಣಿಗೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಗೌತಮ್ ಗಂಭೀರ್, ರಾಮ ಮಂದಿರ ನಿರ್ಮಾಣ ಎಂಬುದು ಭಾರತೀಯರ ಕನಸಾಗಿತ್ತು ಎಂದಿದ್ದಾರೆ. ಕೊನೆಗೂ ರಾಮ ಜನ್ಮ ಭೂಮಿ ವಿವಾದ ಬಗೆ ಹರಿದಿದ್ದು, ಭವ್ಯ ರಾಮ ಮಂದಿರ ನಿರ್ಮಾಣದ ಕನಸು ಈಗ ನನಸಾಗಲಿದೆ. ಭಾರತದ ಐಕ್ಯತೆ ಹಾಗೂ ಸಮಗ್ರತೆಯ ಪ್ರತೀಕವಾದ ಈ ಮಂದಿರಕ್ಕೆ ನಮ್ಮ ಕೈಲಾಗುವ ಸಣ್ಣ ಸಹಾಯವನ್ನು ನೀಡಬೇಕಿದೆ’ ಎಂದು ಗಂಭೀರ್ ಹೇಳಿದ್ದಾರೆ.
ವಿಶ್ವಹಿಂದೂಪರಿಷತ್, ಆರೆಸ್ಸೆಸ್ ಹಾಗೂ ಇನ್ನಿತರ ಸಂಘಟನೆಗಳ ಕಾರ್ಯಕರ್ತರು ಫೆಬ್ರವರಿ 1ರಿಂದ ಮನೆ ಮನೆಗೆ ತೆರಳಿ ದೇಣಿಗೆ ಸಂಗ್ರಹ ಕಾರ್ಯದಲ್ಲಿ ತೊಡಗಿದ್ದಾರೆ



