Connect with us

Dvgsuddi Kannada | online news portal | Kannada news online

ಇನ್ಮುಂದೆ ಹೆಣ್ಣು ಮಕ್ಕಳಿಗೂ ಅನುಕಂಪದ ನೌಕರಿ; ಸರ್ಕಾರ ಮಹತ್ವದ ತೀರ್ಮಾನ

ಪ್ರಮುಖ ಸುದ್ದಿ

ಇನ್ಮುಂದೆ ಹೆಣ್ಣು ಮಕ್ಕಳಿಗೂ ಅನುಕಂಪದ ನೌಕರಿ; ಸರ್ಕಾರ ಮಹತ್ವದ ತೀರ್ಮಾನ

ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಇನ್ಮುಂದೆ ಸರ್ಕಾರರು ಮೃತಪಟ್ಟರೇ ಹೆಣ್ಣು ಮಕ್ಕಳಿಗೂ ನೌಕರಿ ನೀಡುವ ನಿರ್ಧಾರ ಕೈಗೊಂಡಿದೆ.

ಸರ್ಕಾರಿ ನೌಕರರು ಮೃತಪಟ್ಟಾಗ ಆ ಕುಟುಂಬದಲ್ಲಿ ಗಂಡು ಮಕ್ಕಳಿಲ್ಲದೇ ಕೇವಲ ಹೆಣ್ಣು ಮಕ್ಕಳಿದ್ದರೆ ಅವರಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡಲು ಕಾಯ್ದೆಗೆ ತಿದ್ದುಪಡಿ ಮಾಡಿದ್ದು, ಅದಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.ಒಂದು ವೇಳೆ ಹೆಣ್ಣು ಮಕ್ಕಳಿಗೆ ಮದುವೆ ಆಗಿದ್ದರೂ ನೌಕರಿ ನೀಡಲು ತೀರ್ಮಾನಿಸಲಾಗಿದೆ ಎಂದು ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಸಂಪುಟ ಸಭೆಯ ಬಳಿಕ ತಿಳಿಸಿದರು.

ಸ್ವಂತ ಮಕ್ಕಳಿಲ್ಲದೇ ಸಾಕು ಮಕ್ಕಳಿದ್ದರೂ ಅವರಿಗೆ ನೌಕರಿ ನೀಡಲಾಗುವುದು. ಅನುಕಂಪದ ಆಧಾರದಲ್ಲಿ ನೌಕರಿ ಪಡೆಯಲು ಕುಟುಂಬ ಸದಸ್ಯರು ಯಾರು ಅರ್ಹರು ಎಂಬುದರ ವ್ಯಾಖ್ಯೆಯನ್ನೂ ಕರ್ನಾಟಕ ನಾಗರಿಕ ಸೇವಾ(ಅನುಕಂಪದ ಆಧಾರದ ಮೇಲೆ ನೇಮಕಾತಿ)( ತಿದ್ದುಪಡಿ) ನಿಯಮಗಳು2020 ದಲ್ಲಿ ಸ್ಪಷ್ಟಪಡಿಸಲಾಗಿದೆ ಎಂದು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top