ಎಬಿವಿಪಿಯಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತೋತ್ಸವ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)  ವತಿಯಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತೋತ್ಸವದ  ಪರಾಕ್ರಮ ದಿವಸ ವನ್ನು ನಗರದ  ನೂತನ ಕಾಲೇಜ್ ಆವರಣದಲ್ಲಿ  ಆಚರಿಸಲಾಯಿತು. ನೂತನ್ ಪಿಯು ಕಾಲೇಜು ,ಪುಷ್ಪ ಮಹಾಲಿಂಗಪ್ಪ ಪಿಯು ಕಾಲೇಜು, ಶ್ರೀ ಸಿದ್ದೇಶ್ವರ ಪಿಯು ಕಾಲೇಜುಗಳ ಸಹಯೋಗದೊಂದಿಗೆ ಆಯೋಜಿಸಲಾಗಿತ್ತು.  ಕಾರ್ಯಕ್ರಮ  ಉದ್ಘಾಟಿಸಿದ ನಂತರ  ಮಾತನಾಡಿದ ನೂತನ್ ಕಾಲೇಜಿನ ಪ್ರಾಂಶುಪಾಲ ಸುಮಿತ್ರಾ ಕೆ.ಟಿ ಅವರು,  ನೇತಾಜಿ ಸುಭಾಷ್ ಚಂದ್ರ ಬೋಸ್  ಅವರ  ಜೀವನದ ಮೌಲ್ಯಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

nethaji

ಎಬಿವಿಪಿ ದಾವಣಗೆರೆ ನಗರದ ಅಧ್ಯಕ್ಷ  ಪವನ್ ರೇವಣ್ಕರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮುಖ್ಯ ಭಾಷಣಕಾರರಾದ ನಿತಿನ್ ಕುಮಾರ್ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಜೀವನ ಚರಿತ್ರೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿ ಸದಸ್ಯ ಶರತ್, ಹೋರಾಟ ಪ್ರಮುಖ ವಿಜಯ್, ನಗರ ಕಾರ್ಯಕಾರಿಣಿ ಸದಸ್ಯ ಕೋಟ್ರೇಶ್ A.M, ಅಭಿಷೇಕ್, ಎಬಿವಿಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಆಕಾಶ್ ಇಟಗಿ, ಚರಣ್ ಮತ್ತು ಸುಮನ್,ನರೇಂದ್ರ,ರಾಜು, ಹಾಗೂ ನಗರ ಕಾರ್ಯಕರ್ತರು ಉಪಸ್ಥಿತರಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *