ದಾವಣಗೆರೆ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಸಮಾವೇಶಕ್ಕೆ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರನ್ನು ಆಹ್ವಾನಿಸಲು ಸ್ವಾಗತ ಸಮಿತಿ ನಿರ್ಧಾರ ಕೈಗೊಂಡಿದೆ.
ಇಂದು ನಗರ ಚೇತನ ಹೋಟೆಲ್ ನಲ್ಲಿ ಸಭೆ ನಡೆಸಿದ ಪಾದಯಾತ್ರೆ ಸ್ವಾಗತ ಸಮಿತಿ ಈ ನಿರ್ಧಾರ ಕೈಗೊಂಡಿದೆ.ಕೂಡಲಸಂಗಮ ಪೀಠ ಹಾಗೂ ಹರಿಹರ ಪೀಠಗಳು
ಸಂಗಮವಾಗಬೇಕು ಎಂಬ ದೃಷ್ಟಿಯಿಂದ ಜ. 29ರಂದು ದಾವಣಗೆರೆಯಲ್ಲಿ ನಡೆಯುವ ಸಮಾವೇಶದಲ್ಲಿ ಎರಡೂ ಪೀಠಗಳ ಸ್ವಾಮೀಜಿಗಳನ್ನು ಕರೆತರಬೇಕು ಎಂದು ನಿರ್ಧರಿಸಿದ್ದೇವೆ ಎಂದು ಸ್ವಾಗತ ಸಮಿತಿಯ ಗೌರವ ಅಧ್ಯಕ್ಷ ಎಚ್.ಎಸ್.ನಾಗರಾಜ್ ತಿಳಿಸಿದರು.
ಹರಿಹರದ ಪಂಚಮಸಾಲಿ ಪೀಠದ ಶೀಗಳು ಇದಕ್ಕೆ ಸಮಿತಿ ಸೂಚಿಸಿದ್ದಾರೆ. ನಾಳೆ (ಭಾನುವಾರ ) ವಚನಾನಂದ ಸ್ವಾಮೀಜಿ ಅವರನ್ನು ಆಹ್ವಾನಿಸುತ್ತೇವೆ ಎಂದು ತಿಳಿಸಿದರು.



