Connect with us

Dvgsuddi Kannada | online news portal | Kannada news online

ಧಾರವಾಡ ಭೀಕರ ಅಪಘಾತ: ಮತ್ತೊಬ್ಬ ಮಹಿಳೆ ಚಿಕಿತ್ಸೆ ಫಲಿಸದೇ ಸಾವು

ಪ್ರಮುಖ ಸುದ್ದಿ

ಧಾರವಾಡ ಭೀಕರ ಅಪಘಾತ: ಮತ್ತೊಬ್ಬ ಮಹಿಳೆ ಚಿಕಿತ್ಸೆ ಫಲಿಸದೇ ಸಾವು

ಧಾರವಾಡ: ಜನವರಿ 15 ರಂದು ತಾಲೂಕಿನ ಇಟ್ಟಿಗಟ್ಟಿ ಬಳಿ ಟೆಂಪೋ ಟ್ರ್ಯಾವೆಲರ್​ ಮತ್ತು ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಇಂದು (ಜನವರಿ 24) ಸಾವನ್ನಪ್ಪಿದ್ದಾರೆ. ಈ ಮೂಲಕ ಈ ಅಪಘಾತದಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 14 ಏರಿಕೆಯಾಗಿದೆ.

IMG 20210123 192718

ದಾವಣಗೆರೆಯಿಂದ ಗೆಳತಿಯರ ಜೊತೆಗೆ ಗೋವಾಕ್ಕೆ ತೆರಳುತ್ತಿದ್ದಾಗ ನಡೆದಿದ್ದ ಅಪಘಾತದಲ್ಲಿ ಒಂಬತ್ತು ಮಹಿಳೆಯರು ಸೇರಿ ಒಟ್ಟು ಹನ್ನೊಂದು ಜನರು ಸಾವನ್ನಪ್ಪಿದ್ದರು. ಈ ವೇಳೆ ತೀವ್ರಾ ಗಾಯಗೊಂಡಿದ್ದ ವೇದಾ ಮಂಜುನಾಥ ಎಂಬುವವರನ್ನು ಅಂಬ್ಯುಲೇನ್ಸ್ ಮೂಲಕ ಬೆಂಗಳೂರಿಗೆ ಸಾಗಿಸಲಾಗಿತ್ತು. ತಲೆಗೆ ತೀವ್ರ ಪೆಟ್ಟಾದ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಮಹಿಳೆ ಶಿವಮೊಗ್ಗದ ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರ್​ರವರ ಸಂಬಂಧಿಯಾಗಿದ್ದು, ಕುಟುಂಬ ಸದಸ್ಯರು ಮಹಿಳೆಯ ಅಂಗಾಂಗಗಳನ್ನು ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ ದಾನ ಮಾಡಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top