ದಾವಣಗೆರೆ ಸ್ಮಾರ್ಟ್ ಸಿಟಿ ಕಾಮಗಾರಿ ಎಡವಟ್ಟು; ಗುಂಡಿಗೆ ಬಿದ್ದ ವೃದ್ಧೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ನಗರದಲ್ಲಿ ಎಲ್ಲೆಂದರಲ್ಲಿ ರಸ್ತೆ, ಪಾದಚಾರಿ ಮಾರ್ಗ ಅಗೆದು ಹಾಕಿದ್ದಾರೆ. ಸಾರ್ಟ್ ಸಿಟಿ ಕಾಮಗಾರಿ ಹಿನ್ನಲೆ ಅಲ್ಲಲ್ಲಿ ಗುಂಡಿ ಅಗೆದಿದ್ದು, ಕಾಮಗಾರಿ ನಡೆಯವ ಸ್ಥಳದಲ್ಲಿ ಯಾವುದೇ ಸೂಚನ ಫಲಕ ಅಥವಾ ಹಗ್ಗ ಕಟ್ಟದಿರುವುದರಿಂದ ಇಂದು ವೃದ್ಧೆಯೊಬ್ಬರು ಆಯತಪ್ಪಿ ಗುಂಡಿಗೆ ಬಿದಿದ್ದಾರೆ.

ನಗರದ ಚಾಮರಾಜಪೇಟೆ ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು, ಮಳೆ ನೀರು ಹೋಗಲು ಬಾಕ್ಸ್ ಗುಂಡಿಗಳನ್ನು ನಿರ್ಮಿಸಲಾಗುತ್ತಿದೆ. ಈ ಬಾಕ್ಸ್ ಗುಂಡಿ ಕಾಮಗಾರಿಗೆ ಯಾವುದೇ ಮುನ್ನೆಚ್ಚರಿಕೆ ಕ್ರಮ ವಹಿಸದ ಹಿನ್ನಲೆ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಬರುತ್ತಿದ್ದ ವೃದ್ದೆ ಗುಂಡಿಗೆ ಬಿದ್ದಿದ್ದಾರೆ.

IMG 20210125 214356

ವೃದ್ಧೆ ಗುಂಡಿಗೆ ಬಿದ್ದ ತಕ್ಷಣ ಸಾರ್ವಜನಿಕರು ಮೇಲಕ್ಕೆ ಎತ್ತಿದ್ದಾರೆ. ಸಾರ್ಟ್ ಸಿಟಿ ಅಧಿಕಾರಿಗಳು ಕಾಮಗಾರಿ ವೇಳೆ ಯಾವುದೇ ರೀತಿಯ ಎಚ್ಚರಿಕೆ ಫಲಕವಾಗಲಿ ಅಥವಾ ಸೂಕ್ತ ಮುನ್ನೆಚ್ಚರಿಕೆ ವಹಿಸಿದೆ ಇರುವುದು ಎದ್ದು ಕಾಣುತ್ತದೆ. ಇನ್ನು ಮುಂದೆಯಾದರೂ ಇಂತಹ ಘಟನೆಗಳು ಆಗದಂತೆ ಸ್ಮಾರ್ಟ್ ಸಿಟಿಯ ಅಧಿಕಾರಿಗಳು ಸಂಬಂಧಪಟ್ಟ ವರಿಗೆ ಸೂಚಿಸಬೇಕು. ವೃದ್ಧೆಯ ಆರೋಗ್ಯದ ಕಾಳಜಿ ವಹಿಸಬೇಕು ಎಂದು ನೆರದಿದ್ದ ಸಾರ್ವಜನಿಕರು ಆಗ್ರಹಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *