Connect with us

Dvgsuddi Kannada | online news portal | Kannada news online

ಕೆಲವರು ತಾವು ಬದುಕಿದ್ದೇವೆ ಎಂದು ತೋರಿಸಲು ರೈತರು ಹೆಸರಲ್ಲಿ ಹೋರಾಟ ಹಮ್ಮಿಕೊಂಡಿದ್ದಾರೆ: ಸಿಎಂ ಯಡಿಯೂರಪ್ಪ  

Home

ಕೆಲವರು ತಾವು ಬದುಕಿದ್ದೇವೆ ಎಂದು ತೋರಿಸಲು ರೈತರು ಹೆಸರಲ್ಲಿ ಹೋರಾಟ ಹಮ್ಮಿಕೊಂಡಿದ್ದಾರೆ: ಸಿಎಂ ಯಡಿಯೂರಪ್ಪ  

ಬೆಂಗಳೂರು: ಕೆಲವರು ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ರೈತರ ಹೆಸರಲ್ಲಿ ಹೋರಾಟ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದರು. ಟ್ರ್ಯಾಕ್ಟರ್ ರ್ಯಾಲಿ  ವೇಳೆ ಗಲಾಟೆ : ರೈತರ ಮೇಲೆ  ಲಾಠಿ, ಆಶ್ರುವಾಯು ಪ್ರಯೋಗಿಸಿದ ಪೊಲೀಸರು

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.ಕೆಲವರಿಗೆ ತಾವು ಏಕೆ ಪ್ರತಿಭಟನೆ ಮಾಡುತ್ತಿದ್ದೇವೆ ಎಂಬುದು ಗೊತ್ತಿಲ್ಲ. ಯಾವ ಕಾರಣಕ್ಕಾಗಿ ಈ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ ಎಂಬ ಮಾಹಿತಿಯೂ ಇಲ್ಲ. ರೈತರ ಹೆಸರಿನಲ್ಲಿ ಕೆಲವರು ತಾವು ಬದುಕಿದ್ದೇವೆ ಎಂಬುದನ್ನು ತೋರಿಸಿಕೊಳ್ಳಲು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಕ್ತಪಡಿಸಿದರು.

ನಾವು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿಲ್ಲ. ರೈತರ ಪ್ರತಿಭಟನೆ ಹತ್ತಿಕ್ಕಿಲ್ಲ. ಟ್ರ್ಯಾಕ್ಟರ್ ಗಳಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ ಎಂಬ ಕಾರಣಕ್ಕೆ ಪ್ರತಿಭಟನೆ ಬೇಡ ಎಂದು ಹೇಳಿದ್ದೇವಷ್ಟೇ. ನನ್ನ ಮನೆ ಬಾಗಿಲು ಯಾವತ್ತೂ ತೆರೆದೇ ಇರುತ್ತದೆ. ರೈತರು ಯಾವಾಗ ಬೇಕಾದರೂ ಬಂದು ಮಾತುಕತೆ ನಡೆಸಬಹುದು. ಮೊದಲು ನಿಮ್ಮ ಪ್ರತಿಭಟನೆಯನ್ನು ಹಿಂಪಡೆಯಿರಿ ಎಂದು ಸಿಎಂ ಮನವಿ ಮಾಡಿದರು. ವಿರೋಧಿಗಳ ಪ್ರಚೋದನೆಯಿಂದ ರೈತರ ಪರೇಡ್:  ಕೃಷಿ ಸಚಿವ ಬಿ.ಸಿ. ಪಾಟೀಲ್

yeddiyurapp siddramaih

ಆ ವೇಳೆಗಾಗಲೇ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಿದ್ದರಾಮಯ್ಯನವರು ಸಿಎಂ ಯಡಿಯೂರಪ್ಪ ಬರುತ್ತಿದ್ದಂತೆ ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದರು. ನಂತರ ಇಬ್ಬರು ಪರಸ್ಪರ ಕೈ ಮುಗಿದರಲ್ಲದೆ ಕೈ ಹಿಡಿದು ಅಭಿನಂದನೆ ವಿನಿಮಯ ಮಾಡಿಕೊಂಡರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in Home

To Top