ಈ ಸರ್ಕಾರ ಟೇಕ್ ಆಫ್ ಅಲ್ಲಾ, ಫುಲ್ ಆಫ್ ಆಗಿದೆ: ಸಿದ್ದರಾಮಯ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಇದೊಂದು ಅನೈತಿಕವಾಗಿ ಹುಟ್ಟಿದ ಅಂಗ ವೈಫಲ್ಯ ಸರ್ಕಾರ. ಈ ರೀತಿ ಹುಟ್ಟಿರುವ ಸರ್ಕಾರದಿಂದ ಏನು ನಿರೀಕ್ಷೆ ಮಾಡಲು ಸಾಧ್ಯ. ನಮ್ಮ ಸರ್ಕಾರ ಅಡಳಿತದಲ್ಲಿ ಇದ್ದಾಗ ಸರ್ಕಾರ ಇನ್ನು ಟೇಕ್ ಆಫ್ ಆಗಿಲ್ಲ.., ಟೇಕ್ ಆಫ್ ಅಂತಾ ಬಿಜೆಪಿಯವರು ಹೇಳ್ತಿದ್ರು. ಈಗ ಅವರ ಸರ್ಕಾರ ಟೇಕ್ ಆಫ್ ಅಲ್ಲಾ , ಆಫ್​ ಆಗಿದೆ ಎಂದು ಕಿಡಿಕಾರಿದರು.

ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಮಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,   ಕರ್ನಾಟಕದಲ್ಲಿ ಆಪರೇಷನ್ ಕಮಲ ಹುಟ್ಟು ಹಾಕಿದವರು ಯಾರು? ಇದರ ಜನಕ ಯಾರಾದರೂ ಇದ್ದರೇ, ಅದು ಮಿಸ್ಟರ್​ ಯಡಿಯೂರಪ್ಪ. ಪಾಪದ ಹಣ ಖರ್ಚು ಮಾಡಿ ಕಾಂಗ್ರೆಸ್, ಜೆಡಿಎಸ್​​​ ಶಾಸಕರನ್ನ ಸೆಳೆದು ಸರ್ಕಾರ ಮಾಡಿದ್ದರೆ.  ರಾಜ್ಯ ಸರ್ಕಾರ ಡಕೋಟಾ ಎಕ್ಸ್‌ಪ್ರೆಸ್‌ ಸಿನಿಮಾದ ಬಸ್ ನಂತಾಗಿದ್ದು,  ರಸ್ತೆಯಲ್ಲೇ ಡಕೋಟಾ ಬಸ್ ರೀತಿ ಕೆಟ್ಟು ಹೋಗಿದೆ. ಗೇರ್ ಹಾಕೋಕೆ ಆಗೋದಿಲ್ಲ, ಹಾಕಿದ್ರು ಗೇರ್ ಕಿತ್ತಿಕೊಂಡು ಬರುತ್ತೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ  ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯಪಾಲರಿಗೆ ಘನತೆ, ಗೌರವ ಇರುತ್ತೆ. ಸರ್ಕಾರ ರಾಜ್ಯಪಾಲರಿಂದ  ಸುಳ್ಳು ಹೇಳಿಸಿದೆ. ವಸ್ತುಸ್ಥಿತಿ ಏನಿದೆಯೋ ಅನ್ನ ಹೇಳಿಸಬೇಕು ಎಂದು ಸಿಎಂ ವಿರುದ್ದವೂ ಹರಿಹಾಯ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *