ಬೆಂಗಳೂರು: ರಾಜ್ಯ ಸರ್ಕಾರ ಸಾಲ ಬಾಕಿ ಉಳಿಸಿಕೊಂಡ ರೈತ ಭಾಂದವರಿಗೆ ಗುಡ್ ನ್ಯೂಸ್ ನೀಡಿದ್ದು , ಈ ಬಗ್ಗೆ ವಿಧಾನ ಪರಿಷತ್ʼನಲ್ಲಿ ಮಹತ್ವದ ಚರ್ಚೆ ನಡೆಯಿತು.
ವಿಧಾನ ಪರಿಷತ್ʼನಲ್ಲಿ ರೈತರ ಸಾಲಮನ್ನಾದ ಬಗ್ಗೆ ಮಾತನಾಡಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ರೈತರ ಸಾಲ ಮನ್ನಾ ಯೋಜನೆಯಡಿ ಈವರೆಗೆ ಬಾಕಿ ಉಳಿದಿರುವ 57 ಸಾವಿರ ಅರ್ಜಿಗಳ ಸಂಬಂಧ 295 ಕೋಟಿ ರು.ಗಳನ್ನ ಬಿಡುಗಡೆ ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ತಿಳಿಸಿದರು.
ಕಾಂಗ್ರೆಸ್ʼನ ಆರ್. ಧರ್ಮಸೇನಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಾಲ ಮನ್ನಾ ಯೋಜನೆಯಡಿ ಬಂದ ಅರ್ಜಿಗಳನ್ನು ಇತ್ಯರ್ಥ ಮಾಡಲಾಗುತ್ತಿದೆ. ಪ್ರಸ್ತುತ 3 ಲಕ್ಷ ರು.ವರೆಗೆ ಇರುವ ಶೂನ್ಯ ಬಡ್ಡಿ ದರದ ಸಾಲದ ಮಿತಿಯನ್ನ ಹೆಚ್ಚಿಸಲು ಪರಿಶೀಲಿಸಲಾಗುವುದು ಎಂದರು.



