ಬೆಂಗಳೂರು: ಹಿಂದು ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂಬ ಆರೋಪಿಸಿ ಸಾಹಿತಿ ಭಗವಾನ್ ಮುಖಕ್ಕೆ ವಕೀಲೆ ಮಸಿ ಬಳಿದ ಘಟನೆ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.
ಹಿಂದು ಧರ್ಮಕ್ಕೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಮೀರಾ ರಾಘವೇಂದ್ರ ನ ಗರದ 2 ನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಭಗವಾನ್ರವರು ಇಂದು ಕೋರ್ಟ್ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲದ ಹೊರ ಬಂದ ವಕೀಲೆ ವಮೀರಾ ರಾಘವೇಂದ್ರ ಅವರು, ಭಗವಾನ್ ಮುಖಕ್ಕೆ ಮಸಿ ಬಳಿದಿದ್ದಾರೆ.

ಹಿಂದು ಧರ್ಮ ಧರ್ಮವೇ ಅಲ್ಲ. ಹಿಂದು ಎಂಬ ಶಬ್ದ ಅವಮಾನಕರ ಎಂದು ಪ್ರೊ. ಕೆ.ಎಸ್.ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹಿಂದು ಧರ್ಮ ಎಂದರೆ ಬ್ರಾಹ್ಮಣ ಎಂದರ್ಥ. ಗ್ರಾಮೀಣ ಜನರಿಗೆ ಹಿಂದು ಎಂದರೆ ಗೊತ್ತೇ ಇಲ್ಲ. ನೀವು ಯಾವ ಧರ್ಮ ಎಂದರೆ ಒಕ್ಕಲಿಗ, ಕುರುಬ ಅಂತ ಜಾತಿಗಳ ಹೆಸರನ್ನಷ್ಟೇ ಹೇಳುತ್ತಾರೆ. ಹಿಂದು ಪದವನ್ನೇ ತೆಗೆದು ಹಾಕಬೇಕು. ನಿಮಗೆ ಮಾನ ಮರ್ಯಾದೆ ಇದ್ದರೆ ಆ ಪದ ತೆಗೆದು ಹಾಕಿ ಎಂದು ಭಗವಾನ್ ಹೇಳಿದ್ದರು.



