ಬೆಂಗಳೂರು: ನೀವು ಎಷ್ಟೇ ಟೀಕೆ ಮಾಡಿದರೂ ಮುಂಬರು ಎರಡು ವಿಧಾನಸಭೆ ಉಪ ಚುನಾವಣೆ, ಒಂದು ಲೋಸಭಾ ಉಪಚುನಾವಣೆಯಲ್ಲಿ ಬಿಜೆಪಿ ಭಾರೀ ಬಹುಮತದಲ್ಲಿ ಗೆಲುವ ಸಾಧಿಸಲಿದೆ. ಜನ ಕಾಂಗ್ರೆಸ್ ಜತೆ ಇಲ್ಲ. ಇತ್ತೀಚಿನ ಎಲ್ಲಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಸೋತಿದೆ. ಇದಲ್ಲದೆ ಮುಂಬರುವ ಸಾರ್ವಜನಿಕ ಚುನಾವಣೆಯಲ್ಲಿಯೂ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯಗೆ ಸವಾಲು ಹಾಕಿದರು. ರಾಜ್ಯದಲ್ಲಿ ನಾಳೆ ಮತ್ತೆ ರೈತ ಹೋರಾಟ; ರಾಜ್ಯ, ರಾಷ್ಟ್ರೀಯ ಹೆದ್ದಾರಿ ಬಂದ್
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿಎಂ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯದಲ್ಲಿ ಬರಗಾಲವಿತ್ತು. ಬಳಿಕ ಪ್ರವಾಹ ಎದುರಾಯ್ತು, ಅದಾದ ನಂತರ ಕೊರೊನಾ ಸಂಕಷ್ಟದಲ್ಲಿ ರಾಜ್ಯ ಸಿಲುಕಿತು. ಈ ಸಂದರ್ಭದಲ್ಲಿ ದೇವರು ಮೆಚ್ಚುವ ರೀತಿಯಲ್ಲಿ ಕೆಲಸ ಮಾಡಿದ್ದೇನೆ. ಅಂಕಿ ಅಂಶವನ್ನು ಸರಿಯಾಗಿ ನೋಡಿದರೆ, ಸಿದ್ದರಾಮಯ್ಯ ಅವರು ಕೂಡ ಮೆಚ್ಚುವಂತೆ ಕೆಲಸ ಮಾಡಿದ್ದೇನೆ. ಆದರೆ, ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಲ್ಲ. ಸಿದ್ದರಾಮಯ್ಯ ಸ್ಥಾನದಲ್ಲಿ ರಮೇಶ್ ಕುಮಾರ್ ಇದ್ದಿದ್ದರೆ, ಮೆಚ್ಚುಗೆ ವ್ಯಕ್ತಪಡಿಸಿದ್ದರೇನು ಎಂದು ಸಿದ್ದರಾಮಯ್ಯ ಅವರನ್ನು ಮಾತಿನಲ್ಲಿ ತಿವಿದರು.
ತಾಲೂಕು ಪಂಚಾಯತಿ ರದ್ದತಿ ಕುರಿತು ಕೇಂದ್ರಕ್ಕೆ ಪ್ರಸ್ತಾವನೆ :ಸಚಿವ ಈಶ್ವರಪ್ಪ
ಪ್ರವಾಹಕ್ಕೆ ಸಿಕ್ಕಿ ಸಂಕಷ್ಟದಲ್ಲಿದ್ದ ಜಿಲ್ಲೆಗಳಿಗೆ 914 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಏಕಾಂಗಿಯಾಗಿ ನೆರೆ ಸಂಕಷ್ಟಕ್ಕೆ ಸ್ಪಂದಿಸಿದ್ದೇನೆ. ಅಧಿಕಾರದಲ್ಲಿ ಇದ್ದಾಗ ಸವಾಲು ಎದುರಿಸಿದ್ದೇನೆ, ಸವಾಲುಗಳು ನನ್ನನ್ನ ಇನ್ನಷ್ಟು ಗಟ್ಟಿಗೊಳಿಸಿವೆ ಎಂದರು.
ಸಿದ್ದರಾಮಯ್ಯ ಮನಸ್ಸಿಗೆ ಬಂದಂತೆ ಮಾತನಾಡಿದ್ದಾರೆ ಅವರಿಂದ ಅಭಿವೃದ್ಧಿ ಬಗ್ಗೆ ಮಾತ್ರ ಟೀಕೆ ನಿರೀಕ್ಷಿಸಿದ್ದೆವು. ಆದರೆ ಅವರು ಸರ್ಕಾರದ ಬಗ್ಗೆ ಮಾತನಾಡಿದ್ದಾರೆ. ಹೀಗಾಗಿ ನಾನು ಈ ಬಗ್ಗೆ ಮಾತನಾಡುವುದು ಅನಿವಾರ್ಯ. ಕಾಂಗ್ರೆಸ್ ಗೆ ಬಹುಮತವಿಲ್ಲದಿದ್ದರೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಮಾಡಿದರು. ಬಳಿಕ ಯಾವ ರೀತಿ ಆಡಳಿತ ನಡೆಸಿದರು ಎಂಬುದು ರಾಜ್ಯಕ್ಕೆ ಗೊತ್ತಿರುವ ವಿಚಾರ. ಮೈತ್ರಿ ಸರ್ಕಾರದಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡಿದ್ದೆ, ಕಿರುಕುಳ ಅನುಭವಿಸಿದ್ದೆ ಎಂದು ಕುಮಾರಸ್ವಾಮಿಯವರೇ ಹೇಳಿದ್ದಾರೆ ಎಂದರು .
ಸಿದ್ದರಾಮಯ್ಯನವರೇ ನೀವು ಏನು ಹೋಳುತ್ತಿರೋ ಅದೆಲ್ಲವನ್ನೂ ಮಾಡುವ ಶಕ್ತಿ ನಮಗಿದೆ. ಹಲವು ಸವಾಲುಗಳನ್ನು ಎದುರಿಸಿ ಬಂದಿದ್ದೇನೆ. ಸವಾಲುಗಳನ್ನು ಎದುರಿಸಿಯೇ ನಾನು ಗಟ್ಟಿಯಾಗಿದ್ದೇನೆ. ಲೋಕಸಭಾ ಚುನಾವಣೆಯಿಂದ ಕಾಂಗ್ರೆಸ್ ಸೋಲನುಭವಿಸಿದೆ. ಉಪಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸಿದೆ. ಮುಂದಿನ ಮೂರು ಉಪಚುನಾವಣೆಯಲ್ಲೂ ಗೆಲುವು ನಮ್ಮದೇ. ಈ ಬಗ್ಗೆ ಸದನದಲ್ಲಿ ಸವಾಲು ಹಾಕುತ್ತೇನೆ ಎಂದು ಸಿಎಂ ಹೇಳಿದರು.
ಇದಕ್ಕೆ ಕೋಪಗೊಂಡ ಸಿದ್ದರಾಮಯ್ಯ ನಾವು ಅಧಿಕಾರದಲ್ಲಿದ್ದಾಗ ನೀವು ಚುನಾವಣೆಗಳಲ್ಲಿ ಸೋತಿರಲಿಲ್ಲವೇ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಯಡಿಯೂರಪ್ಪ ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್ ದಯನೀಯ ಸೋಲನುಭವಿಸಿದೆ. ಈ ಚುನಾವಣೆಯಿಂದ ನಾಯಕತ್ವವನ್ನೇ ಕಳೆದುಕೊಂಡಿದೆ ಎಂದರು.
ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ಹಾಗಿದ್ದರೆ ಸರ್ಕಾರ ವಿಸರ್ಜನೆ ಮಾಡಿ. ಎಲ್ಲರೂ ಮತ್ತೆ ಚುನಾವಣೆ ಎದುರಿಸೋಣ. ಆ ವೇಳೆ ಯಾರು ಅಧಿಕಾರಕ್ಕೆ ಬರಲಿದ್ದಾರೆ ನೋಡೋಣ ಎಂದರು. ಇದೇ ವೇಳೆ ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ಗದ್ದಲ-ಕೋಲಾಹಲ ಉಂಟಾಯಿತು.