ವಿಜಯನಗರ 31ನೇ ಜಿಲ್ಲೆಯಾಗಿ ಅಧಿಕೃತವಾಗಿ ಘೋಷಣೆ; ಗೆಜೆಟ್ ಅಧಿಸೂಚನೆ ಹೊರಡಿಸಿದ ಸರ್ಕಾರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು : ವಿಜಯನಗರವನ್ನು ರಾಜ್ಯದ 31ನೇ ಜಿಲ್ಲೆಯಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಬಗ್ಗೆ ಅಧಿಕೃತವಾಗಿ ಗೆಜೆಟ್ ಅಧಿಸೂಚನೆ ಹೊರಡಿಸುವ ಮೂಲಕ ವಿಜಯನಗರ ಹೊಸ ಜಿಲ್ಲೆಯಾಗಿದೆ. ಈ ಮೂಲಕ ಬಳ್ಳಾರಿ ಜಿಲ್ಲೆ ವಿಭಜನೆಗೆ ಅಧಿಕೃತವಾಗಿದೆ.

ಈ ಕುರಿತಂತೆ ಕಂದಾಯ ಇಲಾಖೆ(ಭೂ ಮಾಪನ) ಸರ್ಕಾರದ ಅಧೀನ ಕಾರ್ಯದರ್ಶಿ ವಿಟಿ ರಾಜಶ್ರೀ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ( 1964ರ ಕರ್ನಾಟಕ ಅಧಿನಿಯಮ ಸಂಖ್ಯೆ 12)ರ 6ನೇ ಪ್ರಕರಣದ ಮೇರೆಗೆ ಅಗತ್ಯ ಪಡಿಸಲಾದಂತೆ ಬಳ್ಳಾರಿಯ ಜಿಲ್ಲೆಯ ಸರಹದ್ದುಗಳನ್ನು ಮಾರ್ಪಡಿಸಿ, ವಿಜಯ ನಗರ ಜಿಲ್ಲೆ ಎಂಬ ಹೆಸರಿನ ನೂತನ ಜಿಲ್ಲೆಯನ್ನು ರಚಿಸಲಾಗಿದೆ.

ವಿಜಯನಗರ ಜಿಲ್ಲೆಯಲ್ಲಿ ಹೊಸಪೇಟೆ ಜಿಲ್ಲಾ ಕೇಂದ್ರವಾಗಲಿದೆ.  ನೂತನ ಜಿಲ್ಲೆಗೆ ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನ ಹಡಗಲಿ ಹಾಗೂ ಹರಪನಹಳ್ಳಿ ತಾಲೂಕುಗಳನ್ನು ಸೇರ್ಪಡೆಗೊಳಿಸಲಾಗಿದೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *