ದಾವಣಗೆರೆ: ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ ನಾಳೆ (ಫೆ.09) ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.09 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ 11.25ಕ್ಕೆ ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠ, ರಾಜನಹಳ್ಳಿಯ ಹೆಲಿಪ್ಯಾಡ್ಗೆ ಆಗಮಿಸುವರು. ನಂತರ 11.30ಕ್ಕೆ ಮಹರ್ಷಿ ವಾಲ್ಮೀಕಿ ಗುರುಪೀಠ ವತಿಯಿಂದ ಆಯೋಜಿಸಿರುವ ಮಹರ್ಷಿ ವಾಲ್ಮೀಕಿ ಜಾತ್ರೆ-2021 ಮಹೋತ್ಸವದ ಅಂಗವಾಗಿ ಬೃಹತ್ ಜನಜಾಗೃತಿ ಸಮಾವೇಶ ಉದ್ಘಾಟನೆ ಹಾಗೂ ಬುಡಕಟ್ಟು ಸಂಶೋಧನಾ ಕೇಂದ್ರ ಮತ್ತು ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನಾ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಜೊತೆ ಭಾಗವಹಿಸುವರು.
ಮಧ್ಯಾಹ್ನ 1 ಗಂಟೆಗೆ ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠ, ರಾಜನಹಳ್ಳಿಯ ಹೆಲಿಪ್ಯಾಡ್ನಿಂದ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರು ತಲುಪುವರೆಂದು ಜಿಲ್ಲಾ ಉಸ್ತುವಾರಿ ಸಚಿವರ ಅಪ್ತಕಾರ್ಯದರ್ಶಿ ಸಿ.ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



