ಹೊನ್ನಾಳಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರು 5ಲಕ್ಷ ದೇಣಿಗೆ ನೀಡಿದ್ದಾರೆ.
ಪಟ್ಟಣದ ತಮ್ಮ ನಿವಾಸದಲ್ಲಿ ರಾಮಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ದೇಣಿಗೆ ನೀಡಿ ಅವರು ಮಾತನಾಡಿದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಶದ ಉದ್ದಗಲಕ್ಕೂ ಜನರು ದೇಣಿಗೆ ನೀಡುತ್ತಿದ್ದಾರೆ. ಅದೇ ರೀತಿ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲೂ
ಅಭಿಯಾನ ಮಾಡಿ ಜನರಿಂದ ದೇಣಿಗೆ ಸಂಗ್ರಹಿಸಲಾಗುತ್ತಿದೆ ಎಂದರು.
ಮುಖಂಡರಾದ ಎಚ್.ಎಂ. ಶ್ರೀನಿವಾಸಮೂರ್ತಿ, ಉಮಾಕಾಂತ್ ಜೋಯ್ಸ, ಎಚ್.ಎಂ. ಅರುಣ್ ಕುಮಾರ್, ಶ್ರೀನಿವಾಸ್, ಮಾರುತಿ, ಜಿತೇಂದ್ರ, ತಾಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ. ಸುರೇಶ್, ಅರಕೆರೆ ನಾಗರಾಜ್ ಉಪಸ್ಥಿತರಿದ್ದರು.



