Connect with us

Dvgsuddi Kannada | online news portal | Kannada news online

ವಾಲ್ಮೀಕಿ ಮೀಸಲಾತಿ ಹೆಚ್ಚಳ; ಸದನ ಉಪ ಸಮಿತಿ ವರದಿ ಇನ್ನೂ ಅಂತಿಮವಾಗಿಲ್ಲ: ಸಚಿವ ಶ್ರೀರಾಮುಲು  

ಪ್ರಮುಖ ಸುದ್ದಿ

ವಾಲ್ಮೀಕಿ ಮೀಸಲಾತಿ ಹೆಚ್ಚಳ; ಸದನ ಉಪ ಸಮಿತಿ ವರದಿ ಇನ್ನೂ ಅಂತಿಮವಾಗಿಲ್ಲ: ಸಚಿವ ಶ್ರೀರಾಮುಲು  

ದಾವಣಗೆರೆ:  ವಾಲ್ಮೀಕಿ ಸಮುದಾಯ ಮೀಸಲಾತಿ ಬಗ್ಗೆ ಇಂದು ನಡೆಯುತ್ತಿರುವ ವಾಲ್ಮೀಕಿ ಜಾತ್ರೆಯಲ್ಲಿ ಮೀಸಲಾತಿ ಹೆಚ್ಚಳ ಮಾಡುವ ನಿರೀಕ್ಷೆ ಇತ್ತು. ಆದರೆ, ಈ ಬಗ್ಗೆ ವೇದಿಕೆ ಭಾಷಣ ಮಾಡಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು, ರಾಜ್ಯ ಸರ್ಕಾರ ಮೀಸಲಾತಿ ಹೆಚ್ಚಳ ಬಗ್ಗೆ  ಸದನ ಉಪ ಸಮಿತಿ  ರಚನೆ ಮಾಡಿದ್ದು, ಈ ಸಮಿತಿಗೆ ನಾನೇ ಅಧ್ಯಕ್ಷನಾಗಿದ್ಧೇನೆ. ಹೀಗಾಗಿ ಅತೀ ಶೀಘ್ರದಲ್ಲಿಯೇ ಸದನ ಸಮಿತಿ ವರದಿ ಸರ್ಕಾರಕ್ಕೆ ಸಲ್ಲಿಕೆ ಆಗಲಿದ್ದು, 7.5 ರಷ್ಟು ಮೀಸಲಾತಿ ಹೆಚ್ಚಳ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.

ಸದನದ ಉಪ ಸಮಿತಿ ರಚನೆ ಮಾಡುವಾಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ನೀವೇ ಉಪ ಸಮಿತಿಗೆ ಅಧ್ಯಕ್ಷತೆ ವಹಿಸಬೇಕು ಎಂದು ಮನವಿ ಮಾಡಿದರು. ಹೀಗಾಗಿ ಅಂದಿನ ಕಾನೂನು ಸಚಿವ ಮಾಧುಸ್ವಾಮಿ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಉಪ ಸಮಿತಿಯಲ್ಲಿದ್ದು, ಶ್ರೀಘ್ರದಲ್ಲಿಯೇ  ವರದಿ ಸಲ್ಲಿಸಲಾಗುವುದು ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top