ರಾಜ್ಯದ 40 ಸಾವಿರ ಪೌರ ಕಾರ್ಮಿಕರ ಕಾಯಂಗೊಳಿಸಲು ಆಗ್ರಹ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ 40 ಸಾವಿರ ಪೌರ ಕಾರ್ಮಿಕರನ್ನು ಕಾಯಂಗೊಳಿಸುವಂತೆ  ರಾಜ್ಯ ಪೌರ ಕಾರ್ಮಿಕ ಸಂಘ ಒತ್ತಾಯಿಸಿದೆ. ಕಾಯಂಗೊಳಿಸದಿದ್ದರೆ  ಬೀದರ್ ನಿಂದ ಚಾಮರಾಜನಗರ ವರೆಗೆ ಕೆಲಸ ಸ್ಥಗಿತ ಗೊಳಿಸಿ ಹೋರಾಟ ಮಾಡಬೇಕಾಗುತ್ತದೆ ಎಂದು  ರಾಜ್ಯ ಸರ್ಕಾರಕ್ಕೆ ರಾಜ್ಯ ಪೌರ ಕಾರ್ಮಿಕ ರ ಸಂಘದ ಅಧ್ಯಕ್ಷ ಮೈಸೂರ್ ನಾರಾಯಣ ಹೇಳಿದರು.

ದಾವಣಗೆರೆ ನಗರದ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ರಾಜ್ಯ ಪೌರಕಾರ್ಮಿಕರ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದರು, ಈ ಹಿಂದೆ 2017 ರಲ್ಲಿ ರಾಜ್ಯದ ಪೌರ ಕಾರ್ಮಿಕರು,  ಕೆಲಸ  ಸ್ಥಗಿತಗೊಳಿಸಿ ಹೋರಾಟ ನಡೆಸಿದ್ದರು. ‌‌ಅದೇ ಮಾದರಿಯಲ್ಲಿ ಹೋರಾಟ ಮಾಡಲಾಗುವುದು ೆಂದು ಎಚ್ಚರಿಸಿದರು.

ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಪೌರ ಕಾರ್ಮಿಕರು ಗುತ್ತಿಗೆ ನೌಕರಾಗಿದ್ದಾರೆ.  ಇವರಿಗೆ ಆರೋಗ್ಯ ಭದ್ರತೆ  ಸೂಕ್ತ ಸಂಬಳ ಸಿಗುತ್ತಿಲ್ಲ. ಸರ್ಕಾರಕ್ಕೆ ಮೂರು ತಿಂಗಳ ಗಡುವು ನೀಡಲಿದ್ದು, ಅಷ್ಟರೊಳಗೆ ಬೇಡಿಕೆ ಈಡೇರಿಸಬೇಕು. ಸರ್ಕಾರ ಪೌರ ಕಾರ್ಮಿಕರ ಬಗ್ಗೆ ನಿರ್ಲಕ್ಷ್ಯ ಮಾಡಿದರೇ ಹೋರಾಟ ಅನಿವಾರ್ಯ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *