Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಚಳಿ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಚಳಿ

ಬೆಂಗಳೂರು : ರಾಜ್ಯದಲ್ಲಿ  ಚಳಿಯ ತೀವ್ರತೆ ಹೆಚ್ಚಾಗಿದ್ದು, ಇನ್ನೂ ಮೂರು ದಿನ ಭಾರೀ ಚಳಿ ಇರಲಿದೆ. ಫೆಬ್ರವರಿ 14 ರವರೆಗೆ ರಾಜ್ಯದಲ್ಲಿ ಚಳಿ ಇದಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಒಣ ಹವೆ ಬೀಸುತ್ತಿರುವುದರಿಂದ ಚಳಿಯ ಅನುಭವವಾಗುತ್ತಿದೆ. ಮೋಡಗಳು ಇಲ್ಲದಿರುವುದರಿಂದ ಚಳಿಯನ್ನು ಹೆಚ್ಚಿಸಿದೆ. ಈ ವಾತಾವರಣ ಫೆಬ್ರವರಿ 14 ರವರೆಗೆ ಇರಲಿದೆ. ನಂತರ ಒಣ ಹವೆ ಕಡಿಮೆಯಾಗಿ ಉಷ್ಣಾಂಶ ಏರಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ರಾಜ್ಯದ ಸರಾಸರಿ ಉಷ್ಣಾಂಶ 12ರಿಂದ 16 ಡಿಗ್ರಿ ಸೆಲ್ಸಿಯಸ್‌ ಇದೆ. ಶಿವಮೊಗ್ಗದಲ್ಲಿ ಸರಾಸರಿ ಉಷ್ಣಾಂಶ ಕನಿಷ್ಠ 14.8 ಮತ್ತು ಗರಿಷ್ಠ 31.2 ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ. ಇನ್ನು ಬೆಂಗಳೂರು, ಗ್ರಾಮಾಂತರ, ಕೋಲಾರ, ಹಾಸನ, ಕೊಡಗು, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಬೀದರ್, ಬೆಳಗಾವಿ, ಚಿಕ್ಕಮಗಳೂರು, ತುಮಕೂರು, ಧಾರವಾಡ ಜಿಲ್ಲೆಯ ಕೆಲ ಹಳ್ಳಿಗಳಲ್ಲಿ ಉಷ್ಣಾಂಶವು 6 ರಿಂದ 8 ಡಿಗ್ರಿಸೆಲ್ಸಿಯಸ್ ದಾಖಲಾಗಿದೆ

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top