Connect with us

Dvgsuddi Kannada | online news portal | Kannada news online

ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ವಿರುದ್ಧ ಪುತ್ರಿಯಿಂದಲೇ ದೂರು ದಾಖಲು

ಪ್ರಮುಖ ಸುದ್ದಿ

ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ವಿರುದ್ಧ ಪುತ್ರಿಯಿಂದಲೇ ದೂರು ದಾಖಲು

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ವಿರುದ್ಧ ಪುತ್ರಿಯಿಂದಲೇ ದೂರು ದಾಖಲಾಗಿದೆ.  ನನ್ನ ತಂದೆ ಹಣಕ್ಕಾಗಿ ಪೀಡಿಸುತ್ತಿದ್ದು,  ಅವರಿಂದಲೇ ನನಗೆ ಜೀವ ಬೆದರಿಕೆಯಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸತ್ಯಜಿತ್ ಅವರ ಪುತ್ರಿಯೇ ತಂದೆಯ ವಿರುದ್ಧ ದೂರು ದಾಖಲಿಸಿದ್ದಾರೆ.

ಇಂದು ಹಿರಿಯ ನಟ ಸತ್ಯಜಿತ್ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಗೆ ತೆರಳಿ ಸತ್ಯಜಿತ್ ಪುತ್ರಿ ವೃತ್ತಿಯಲ್ಲಿ ಪೈಲೆಟ್ ಆಗಿರುವಂತ ಅಖ್ತರ್ ಸ್ವಲೇಹಾ ಅವರು, ನನ್ನ ತಂದೆ ಸತ್ಯಜಿತ್ ಅವರು, ಪದೇ ಪದೇ ಹಣಕ್ಕಾಗಿ ಪೀಡಿಸುತ್ತಿದ್ದಾರೆ. ಹಣ ನೀಡದೇ ಇದ್ದಾಗ ರೌಡಿಗಳನ್ನು ಬಿಟ್ಟು ಬೆದರಿಸುತ್ತಿದ್ದಾರೆ. ನನಗೆ ಜೀವ ಬೆದರಿಕೆ ಇದೆ.ನನಗೆ ರಕ್ಷಣೆ ನೀಡಬೇಕು ಹಾಗೂ, ಸತ್ಯಜಿತ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ದೂರು ನೀಡಿದ್ದಾರೆ. ಇದೀಗ ಪೊಲೀಸರು ಹಿರಿಯ ನಟ ಸತ್ಯಜಿತ್ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top