ದಾವಣಗೆರೆ ಮೇಯರ್ ಚುನಾವಣೆ: ನೂರಕ್ಕೆ ನೂರಷ್ಟು ಬಿಜೆಪಿ ಅಧಿಕಾರ ಹಿಡಿಯಲಿದೆ: ಸಂಸದ ಜಿ.ಎಂ ಸಿದ್ದೇಶ್ವರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಜಗಳೂರು: ಈ ಬಾರಿಯೂ ಕೂಡ ಬಿಜೆಪಿ ಪಕ್ಷ ದಾವಣಗೆರೆ ಮಹಾನಗರ ಪಾಲಿಕೆ ಅಧಿಕಾರ ಹಿಡಿಯಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸಂಸದ ಜಿ.ಎಂ ಸಿದ್ದೇಶ್ವರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆ. 24 ರಂದು ನಡೆಯುವ ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ನೂರಕ್ಕೆ ನೂರಷ್ಟು ಬಿಜೆಪಿ ಅಧಿಕಾರ ಹಿಡಿಯಲಿದೆ. 58 ಜನ ಮೇಯರ್ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಯಾರನ್ನು ಕೂಡ ಅಕ್ರಮವಾಗಿ ಸೇರಿಸಿಲ್ಲ. ಸಚಿವ ಆರ್. ಶಂಕರ್ ಅವರು ಇಲ್ಲಿ ನಿವಾಸದ ವಿಳಾಸ ಕೊಟ್ಟಿರುವುದರಿಂದ ಅವರ ಹೆಸರು ಮತದಾರ ಪಟ್ಟಿಯಲ್ಲಿ ಸೇರಿದೆ. ಎಲ್ಲವೂ ಕಾನೂನು ಪ್ರಕಾರ ನಡೆಲಿದೆ ಎಂದರು.

ಮೇಯರ್ ಯಾರು ಆಗಬೇಕು ಎಂಬುದು ಇನ್ನೂ ನಿರ್ಧಾರ ಆಗಿಲ್ಲ. ಫೆ. 23 ರಂದು ಶಾಸಕ ರವೀಂದ್ರನಾಥ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಪಕ್ಷೇತರ ನಾಲ್ವರು ಕೂಡ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದವರೇ ಇಬ್ಬರು ಸದಸ್ಯರು ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂದರು.

ಮೇಯರ್ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪ ಮೇಯರ್ ಸ್ಥಾನಕ್ಕೆ ಎಸ್ ಸಿ ಮಹಿಳೆಗೆ ಮೀಸಲಾತಿ ನಿಗದಿಯಾಗಿದೆ. ಇದು ಸರ್ಕಾರದ ಅಧಿಕೃತ ಮೀಸಲಾತಿಯಾಗಿದೆ. ನಮ್ಮಲ್ಲಿ 21 ಜನರೂ ಕೂಡ ಆಕಾಂಕ್ಷಿಯಾಗಿದ್ದಾರೆ. ಕೋರ್ ಕಮಿಟಿ ನಿರ್ಧಾರವೇ ಅಂತಿಮ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *