ಭತ್ತದ ಎಲೆ ಕವಚ ಒಣಗುವ ರೋಗದ ನಿರ್ವಹಣಾ ಕ್ರಮ ಹೇಗೆ..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಭತ್ತ ನಾಟಿ ಸುರುವಾಗಿದ್ದು , ಅಲ್ಲಲ್ಲಿ ಎಲೆ ಕವಚ ಒಣಗುವ ರೋಗವು ಕಾಣಿಸಿಕೊಂಡಿದೆ. ಆದ್ದರಿಂದ ರೈತ ಬಾಂಧವರು ತಕ್ಷಣವೇ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತವಾಗಿದೆ.

ಹಾನಿಯ ಲಕ್ಷಣಗಳು: ಎಲೆಯ ಕವಚದ ಮೇಲೆ ಕಂದು ಅಂಚುಳ್ಳ ಹುಲ್ಲಿನ ಬಣ್ಣದ ಉದ್ದ ಮಚ್ಚೆಗಳು ಕಾಣಿಸಿಕೊಂಡು ಎಲೆಗಳು ಒಣಗುತ್ತವೆ. ಕೆರೆ ಕೆಳಗಿನ ಅಥವಾ ನೀರಿನ ಒತ್ತಡ ಇರುವ ತಗ್ಗು ಪ್ರದೇಶದ ಗದ್ದೆಗಳಲ್ಲಿ ರೋಗದ ಬಾಧೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.

ನಿರ್ವಹಣಾ ಕ್ರಮಗಳು: ನೀರು ಹರಿಸುವಾಗ ಜೊತೆಯಲ್ಲಿ ಸಗಣಿ ರಾಡಿ ಬಿಡುವುದು ಸೂಕ್ತ. ಸಗಣಿ ರಾಡಿ ಜೊತೆಯಲ್ಲಿ ಟ್ರೈಕೋಡರ್ಮಾವನ್ನು ಬೆರೆಸಿ ಬಿಡುವುದು ತುಂಬಾ ಉಪಯುಕ್ತ. ಸಗಣಿ ರಾಡಿಯ ಉಪಚಾರ ರೋಗ ಹರಡುವುದನ್ನು ತಡೆಗಟ್ಟುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. 1 ಗ್ರಾಂ. ಕಾರ್ಬನ್‍ಡೈಜಿಂ 50 ಡಬ್ಲ್ಯುಪಿ ಅಥವಾ 1 ಮಿ.ಲೀ. ಪ್ರೊಪಿಕೊನೊಜೋಲ್ 25 ಇ.ಸಿ. ಅಥವಾ 2 ಮಿ.ಲೀ. ಹೆಕ್ಸಾಕೋನಜೋಲ್ 5 ಇ.ಸಿ. ಯನ್ನು 1 ಲೀ. ನೀರಿಗೆ ಬೆರೆಸಿ ಸಿಂಪಡಿಸುವುದು ಅಥವಾ 0.4 ಗ್ರಾಂ. ಟ್ರೈಶ್ಲಾಕ್ಸಿಸ್ಟ್ರೋಬಿನ್ 25 ಮತ್ತು 0.4 ಗ್ರಾಂ. ಟೆಬುಕೊನಜೋಲ್ 50 ಅನ್ನು 1 ಲೀ. ನೀರಿಗೆ ಬೆರೆಸಿ ಸಿಂಪಡಿಸುವುದು ಅಥವಾ ಇವೆರಡರ ಸಂಯುಕ್ತ ರಾಸಾಯನಿಕ ಲಭ್ಯವಿದ್ದಲ್ಲಿ ಸಿಂಪರಣೆ ಮಾಡುವುದು.

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *