Connect with us

Dvgsuddi Kannada | online news portal | Kannada news online

ಧರ್ಮೇಗೌಡ ಸಾವಿನಿಂದ ತೆರವಾಗಿದ್ದ ಎಂಎಲ್ಸಿ ಸ್ಥಾನಕ್ಕೆ ಮಾ. 15ರಂದು ಚುನಾವಣೆ

ರಾಜಕೀಯ

ಧರ್ಮೇಗೌಡ ಸಾವಿನಿಂದ ತೆರವಾಗಿದ್ದ ಎಂಎಲ್ಸಿ ಸ್ಥಾನಕ್ಕೆ ಮಾ. 15ರಂದು ಚುನಾವಣೆ

ನವದೆಹಲಿ : ರಾಜ್ಯದ ವಿಧಾನ ಪರಿಷತ್ ಉಪ ಸಭಾಪತಿಯಾಗಿದ್ದ ಎಸ್.ಎಲ್.   ಧರ್ಮೇಗೌಡ  ನಿಧನದಿಂದ ತೆರವಾಗಿದ್ದಂತ ಒಂದು ಪರಿಷತ್ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ. ಮಾರ್ಚ್ 15ರಂದು ಚುನಾವಣೆ ನಡೆಯಲಿದ್ದು, ಅಂದು ಸಂಜೆಯೇ ಫಲಿತಾಂಶವನ್ನು ಘೋಷಣೆ ಮಾಡುವುದಾಗಿ ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಧರ್ಮೇಗವಡ ಅವರು ಇತ್ತೀಚೆಗೆ ನಿಧನ ಹೊಂದಿದ್ದರು.

ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ಕೇಂದ್ರ ಚುನಾವಣಾ ಆಯೋಗವು, ಎಸ್. ಎಲ್.  ಧರ್ಮೇಗೌಡ ಅವರ ನಿಧನದಿಂದಾಗಿ ತೆರವಾಗಿದ್ದ  ಒಂದು ವಿಧಾನ ಪರಿಷತ್ ಸ್ಥಾನಕ್ಕೆ ಫೆಬ್ರವರಿ 25ರಂದು ಚುನಾವಣೆಗಾಗಿ ಅಧಿಸೂಚನೆ ಹೊರಡಿಸಲಾಗುತ್ತದೆ. ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಮಾರ್ಚ್ 04  ಕೊನೆಯ  ದಿನಾಂಕವಾಗಿದೆ.  ಮಾರ್ಚ್ 5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮಾರ್ಚ್ 8ರಂದು ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನವಾಗಿದೆ. ಮಾರ್ಚ್ 15ರಂದು ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮಾರ್ಚ್ 15ರಂದು ಸಂಜೆ 5 ಗಂಟೆಗೆ ಮತಏಣಿಕೆ ನಡೆದು ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top