ಇಂದಿನಿಂದ ಮೈಲಾರಲಿಂಗೇಶ್ವರ ಜಾತ್ರೆ; ಭಕ್ತರಿಗಿಲ್ಲ ಅವಕಾಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ವಿಜಯನಗರ: ಪ್ರತಿ ವರ್ಷದಂತೆ ಈ ವರ್ಷವೂ ವಿಜಯನಗರ ಜಿಲ್ಲೆಯ ಹೂವಿನಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರದಲ್ಲಿ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಜಾತ್ರೆ, ಕಾರ್ಣಿಕೋತ್ಸವ ಫೆ. 19 ರಿಂದ ಮಾ.02ರವರೆಗೆ ನಡೆಯಲಿದೆ. ಈ ಬಾರಿ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಮತ್ತು ಭಕ್ತಾಧಿಗಳ ಆರೋಗ್ಯದ ಹಿತದೃಷ್ಟಿಯಿಂದ ಭಕ್ತಾಧಿಗಳು, ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ನಿಷೇಧಿಸಲಾಗಿದೆ.

ಸಾರ್ವಜನಿಕ ಮತ್ತು ಭಕ್ತಾಧಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್-19(ಕೊರೋನಾ ವೈರಾಣು-2019) ಹರಡದಂತೆ ತಡೆಯುವ ಕುರಿತು ಮುಂಜಾಗ್ರತಾ ಕ್ರಮವಾಗಿ ಬಳ್ಳಾರಿ ಜಿಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ವಿಪತ್ತು ನಿರ್ವಹಣಾ ಕಾಯ್ದೆ-2005 ಹಾಗೂ ದಂಡ ಪ್ರಕ್ರಿಯಾ ಸಂಹಿತೆ-1973 ಕಲಂ 144 ಅಡಿ ದಿನಾಂಕ 19-02-2021ರಿಂದ ದಿನಾಂಕ 02-03-2021ರವರೆಗೆ ಮೈಲಾರ ಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಕಾರ್ಣಿಕೋತ್ಸವಗಳಿಗೆ ಭಕ್ತಾಧಿಗಳು, ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ನಿಷೇಧಿಸಿದ್ದಾರೆ.

ಈ ಹಿನ್ನಲೆಯಲ್ಲಿ ಭಕ್ತಾಧಿಗಳಿಗೆ ನೀರು, ಬೆಳಕು, ಶೌಚಾಲಯ ಇನ್ನಿತರೆ ಮೂಲಭೂತ ಸೌಕರ್ಯಗಳು ಇರುವುದಿಲ್ಲ. ಮೈಲಾರ ಗ್ರಾಮ ಹಾಗೂ ಸುತ್ತ-ಮುತ್ತಲಿನ ಹೊಲಗಳಲ್ಲಿ ವಸತಿ ಮಾಡಲು ಅವಕಾಶವಿರುವುದಿಲ್ಲ. ಎತ್ತಿನ ಬಂಡಿ, ಬೈಕ್, ಟ್ರ್ಯಾಕ್ಟರ್, ಕಾರು, ಬಸ್ಸು ಹಾಗೂ ಇತರೆ ಗೂಡ್ಸ್ ವಾಹನಗಳು ಮತ್ತು ಸಾರ್ವಜನಿಕರು ಭಕ್ತಾಧಿಗಳಿಗೆ ದಿನಾಂಕ 19-02-2021ರಿಂದ 02-03-2021ರವರೆಗೆ ಮೈಲಾರ ಕ್ಷೇತ್ರಕ್ಕೆ ಪ್ರವೇಶವಿರುದಿಲ್ಲ. ಭಕ್ತಾಧಿಗಳು, ಸಾರ್ವಜನಿಕರು ಸಹಕರಿಸಬೇಕೆಂದು ವಿನಂತಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *