ಪುದುಚೇರಿ: ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸಿಎಂ ವಿ. ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಂಡಿದೆ. ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫಲವಾದ ಹಿನ್ನೆಲೆ ಸರ್ಕಾರ ಪತನಗೊಂಡಿದೆ. ಹೈಕಮಾಂಡ್ ಬುಲಾವ್; ರಾತ್ರೋರಾತ್ರಿ ದೆಹಲಿಗೆ ತೆರಳಿದ ಯತ್ನಾಳ್
ಇಂದು ನಡೆದ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದು ಸ್ಪೀಕರ್ ಹೇಳಿದರು. ಆಗ ವಿಧಾನಸಭೆಯಿಂದ ಮುಖ್ಯಮಂತ್ರಿ ನಾರಾಯಣಸ್ವಾಮಿ ಮತ್ತು ಕಾಂಗ್ರೆಸ್ ಸದಸ್ಯರು ಸದನದಿಂದ ಹೊರ ನಡೆದರು.
ಶಾಸಕರಾದ ಎ.ಜಾನ್ ಕುಮಾರ್, ಲಕ್ಷ್ಮೀ ನಾರಾಯಣ ಮತ್ತು ವೆಂಕಟೇಶನ್ ರಾಜೀನಾಮೆಯಿಂದ ಪುದುಚೇರಿ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿತ್ತು. 33 ಶಾಸಕರನ್ನು ಹೊಂದಿದ್ದ ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯರ ಬಲ 11ಕ್ಕೆ ಕುಸಿದಿತ್ತು. ವಿಪಕ್ಷದ ಬಲ 14ರಷ್ಟಿತ್ತು. ಈ ಹಿನ್ನೆಲೆಯಲ್ಲಿ ಫೆ.22ರೊಳಗೆ ಬಹುಮತ ಸಾಬೀತು ಪಡಿಸುವಂತೆ ಲೆಫ್ಟಿನೆಂಟ್ ಗವರ್ನರ್ ತಮಿಳ್ ಸಾಯಿ ಸಿಎಂ ನಾರಾಯಣಸ್ವಾಮಿಗೆ ಸೂಚಿಸಿದ್ದರು.