ದಾವಣಗೆರೆ: ಜಿಲ್ಲಾ ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ತಂಡ ತಾಲೂಕಿನ ಕಲ್ಲು ಕ್ವಾರಿಗಳ ಮೇಲೆ ದಾಳಿ ಮಾಡಿದೆ. ದಾಳಿ ವೇಳೆ ಜೀವಂತ ಎಲೆಕ್ಟ್ರಿಕ್ ಡಿಟೋನೇಟರ್ ಜಪ್ತಿ ಮಾಡಿದ್ದು, ಜಮೀನಿನ ಮಾಲೀಕ ಆಲೂರುಹಟ್ಟಿ ಗ್ರಾಮದ ಕುಮಾರ್ ನಾಯ್ಕ್ ಎಂಬುವರ ಮೇಲೆ ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎಸ್ ಪಿ ಅವರ ಮಾರ್ಗದರ್ಶನದಲ್ಲಿ ದಾವಣಗೆರೆ ಗ್ರಾಮಾಂತರ ವಿಭಾಗದ ಉಪಾಧೀಕ್ಷಕ ನರಸಿಂಹ ವಿ. ತಾಮ್ರಧ್ವಜ , ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ ಐ ಜಿ.ಆರ್ ಅಶ್ವಿನ್ ಕುಮಾರ್ , ವಿನಯ್ ಬಣಕಾರ ಹಾಗೂ ಗಣಿ ಮತ್ತು ವಿಜ್ಞಾನ ಇಲಾಖೆ ತಜ್ಞರ ತಂಡ ದಾಳಿ ನಡೆಸಿದೆ.
ಆಲೂರು ಗ್ರಾಮದ ಸರ್ವೇ ನಂಬರ್ 68/9 ರಲ್ಲಿ ಕಲ್ಲು ಕ್ವಾರಿ ನಡೆಸುತ್ತಿರುವುದು ಕಂಡು ಬಂದಿದೆ. ಈ ವೇಳೆ ಒಂದು ಜೀವಂತ ಎಲೆಕ್ಟ್ರಿಕ್ ಡಿಟೋನೇಟರ್ ಪತ್ತೆಯಾಗಿದ್ದು, ದಾಳಿ ವೇಳೆ ಕ್ವಾರಿಯಲ್ಲಿ ಯಾರು ಇಲ್ಲದ ಕಾರಣ ಜಮೀನುನ ಮಾಲೀಕ ಕುಮಾರ್ ನಾಯ್ಕ್ ಮೇಲೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.



