ವಿಜಯನಗರ : ಪ್ರತಿ ವರ್ಷದಂತೆ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಶ್ರೀಗುರು ಕೊಟ್ಟೂರೇಶ್ವರ ರಥೋತ್ಸವವನ್ನು ಮಾರ್ಚ್ 7ರಂದು ನಡೆಯಬೇಕಿತ್ತು. ಆದರೆ, ಈಗ ಕೊರೋನಾ ಎರಡನೇ ಅಲೆಯ ಭೀತಿಯ ಹಿನ್ನಲೆಯಲ್ಲಿ ಶ್ರೀಗುರು ಕೊಟ್ಟೂರೇಶ್ವರ ರಥೋತ್ಸವನ್ನು ಜಿಲ್ಲಾಡಳಿತ ರದ್ದುಗೊಳಿಸಿದೆ.
ಹಿಂದಿನ ಬಳ್ಳಾರಿ ಜಿಲ್ಲೆಯ (ಈಗ ವಿಜಯನಗರ ಜಿಲ್ಲೆ) ಶ್ರೀಗುರು ಕೊಟ್ಟೂರೇಶ್ವರ ರಥೋತ್ಸವ ರಾಜ್ಯ ಪ್ರಸಿದ್ಧ ರಥೋತ್ಸಗಳಲ್ಲೊಂದು. ಇಂತಹ ರಥೋತ್ಸವವನ್ನು ಕೊರೋನಾ ಸೋಂಕಿನ ಭೀತಿಯ ನಡುವೆಯೂ ಮಾರ್ಚ್ 7ರಂದು ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಕೂಡ ಮಾಡಿಕೊಂಡಿತ್ತು. ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕಿನ ಭೀತಿ ಆರಂಭಗೊಂಡಿರುವ ಕಾರಣ ರಥೋತ್ಸವಕ್ಕೆ ಆರೋಗ್ಯ ಇಲಾಖೆ ಬ್ರೇಕ್ ಹಾಕಿದೆ.
ಈ ಹಿನ್ನಲೆಯಲ್ಲಿ ಮಾರ್ಚ್ 7ರಂದು ನಡೆಯಬೇಕಿದ್ದ ಶ್ರೀಗುರು ಕೊಟ್ಟೂರೇಶ್ವರ ರಥೋತ್ಸವವನ್ನು ಜಿಲ್ಲಾಡಳಿತ ರದ್ದು ಪಡಿಸಿದೆ. ಪೂಜಾ ಕೈಂಕಾರ್ಯಕ್ಕೆ ಮಾತ್ರವೇ ಅವಕಾಶ ನೀಡಿದೆ.



