ಔರಾದ್ಕರ್ ವರದಿ ಅನ್ವಯ ಪೊಲೀಸ್ ನೌಕರರ ವೇತನ ಹೆಚ್ಚಳ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿಸುದ್ದಿ.ಕಾಂ ,ಬೆಂಗಳೂರು: ರಾಘವೇಂದ್ರ ಔರಾದ್ಕರ್ ಸಮಿತಿ ವರದಿ ಅನ್ವಯ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ನೌಕರರ ವೇತನ ಶ್ರೇಣಿ ಪರಿಷ್ಕರಿಸಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ದೀಪಾವಳಿ ಗಿಫ್ಟ್ ನೀಡಿದೆ.

2019ರ ಆಗಸ್ಟ್‌ 1ರಿಂದ ಅನ್ವಯವಾಗುವಂತೆ ತಕ್ಷಣಕ್ಕೆ ಜಾರಿಗೆ ಬರುವಂತೆ ಶನಿವಾರ ಆದೇಶಿಸಿಸಲಾಗಿದೆ.  ದೀಪಾವಳಿ ಹಬ್ಬ ಮತ್ತು ಪೊಲೀಸ್‌ ಹುತಾತ್ಮದಿನದ ಮುನ್ನಾ ದಿನ ಈ ಆದೇಶ ಹೊರ ಬಿದ್ದಿರುವುದು ಪೊಲೀಸ್ ಇಲಾಖೆಯ ನೌಕರಲ್ಲಿ ಹರ್ಷ ಮೂಡಿಸಿದೆ. ಪೊಲೀಸ್ ಇಲಾಖೆಯ ಎಲ್ಲಾ ಶ್ರೇಣಿಯ ಸಿಬ್ಬಂದಿಗೆ ಕಷ್ಟ ಪರಿಹಾರ ಭತ್ಯೆಯ ಜತೆಗೆ ಹೆಚ್ಚುವರಿಯಾಗಿ ₹ 1,000 ಮಂಜೂರು ಮಾಡಿದೆ.

ಪೊಲೀಸ್ ವೇತನ ಹೆಚ್ಚಳ ಬಗ್ಗೆ 2016ರ ಜೂನ್ 21ರಂದು ರಾಘವೇಂದ್ರ ಔರಾದ್ಕರ್ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿಯು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ. ವರದಿಯ ಅನ್ವಯ ಸರ್ಕಾರ 2019ರ ಆಗಸ್ಟ್ 1ರಿಂದ ಜಾರಿಗೆ ಬರುವಂತೆ ವೇತನವನ್ನು ಉನ್ನತೀಕರಗೊಳಿಸಲಾಗಿದೆ.

ಈ ವರದಿ ಜಾರಿಯಿಂದಾಗಿ ಹೊಸದಾಗಿ ಸೇರುವ ಪೊಲೀಸ್‌ ಕಾನ್‌ಸ್ಟೆಬಲ್‌ಗಳಿಗೆ ಇರುವ ಮಾಸಿಕ ವೇತನದ ಒಟ್ಟು ₹ 30,427 ರಿಂದ  ಬದಲಿಗೆ ₹ 34,267 ಹೆಚ್ಚಳವಾಗಲಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *