ಸಚಿವರು ದೇವಲೋಕದಿಂದ ಇಳಿದು ಬಂದಿದ್ದರಾ..?; ಸಚಿವ ಸುಧಾಕರ್ ವಿರುದ್ಧ ರೇಣುಕಾಚಾರ್ಯ ಕಿಡಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಮಿನಿಸ್ಟರ್ ಗಳೆಂದರೆ ದೇವಲೋಕದಿಂದ ಇಳಿದು ಬಂದವರಾ…? ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಶಾಸಕ ಎಂ.ಪಿ. ರೇಣುಕಾಚಾರ್ಯ,ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್  ವಿರುದ್ಧ ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರೇಣುಕಾಚಾರ್ಯ, ನಾವೇನು ಬಿಟ್ಟಿ ಬಿದ್ದಿದ್ದೀವಾ? ಕೆಲವು ಸಚಿವರು ಕೈಗೇನೇ ಸಿಗಲ್ಲ. ಅವರ ಪಿ.ಎ ಗಳು ಪಿ.ಎಸ್ ಗಳು ಫೋನ್ ರಿಸೀವ್ ಮಾಡುವುದಿಲ್ಲ. ಕಾಂಗ್ರೆಸ್ ಜೆಡಿಎಸ್ ನಿಂದ ಬಂದ ಎಲ್ಲ ಸಚಿವರು ಹೀಗೆ ಎಂದು ನಾನು ಹೇಳಲ್ಲ. ಆದರೆ ಕೆಲವರು ಮಾತ್ರ ನಮಗೆ ಕೈಗೆ ಸಿಗಲ್ಲ ಎಂದು ಆರೋಪಿಸಿದರು.

 ನಾನು ಹತ್ತಾರು ಭಾರಿ ಭೇಟಿ ಆಗಿದ್ದೇನೆ. ಪತ್ರ ಬರೆದಿದ್ದೇನೆ, ಏನೂ ಪ್ರಯೋಜನವಾಗಿಲ್ಲ. ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ನಾನು ರಾಜಿ ಆಗುವ ಮಾತೇ ಇಲ್ಲ. ನಾನು ಧರಣಿ ಮಾಡಬೇಕು ಎಂದು ನಿರ್ಧಾರ ಮಾಡಿದ್ದೆ. ನಿನ್ನೆ ಅವರ ಪಿ.ಎಸ್ ಫೋನ್ ಮಾಡಿದರು. ಕೆಲವು ಕೆಲಸ ಆಗಿದೆ. ನನ್ನ ಕೆಲಸ ಆದ ಮಾತ್ರಕ್ಕೆ ನಾನು ಸುಮ್ಮನಿರಲ್ಲ ಎಂದು ರೇಣುಕಾಚಾರ್ಯ ಹೇಳಿದರು.

ನಮ್ಮಂಥವರಿಗೆ ಹೀಗಾದ್ರೆ, ಪಾಪ ಬಾಯಿ ಇಲ್ಲದ ಶಾಸಕರಿದ್ದಾರೆ. ಅವರ ಕೆಲಸಗಳೂ ಆಗಬೇಕು. ಆದರೆ ಐದಾರು ಸಚಿವರು ಕೈಗೆ ಸಿಗಲ್ಲ .ನಾನು ಮೂರು ಬಾರಿ ಶಾಸಕನಾಗಿ ನನ್ನ ಕ್ಷೇತ್ರದಲ್ಲಿ ಆಯ್ಕೆ ಆಗಿದ್ದೇನೆ. ನಾವೇನು ಬಿಟ್ಟಿ ಬಿದ್ದಿದ್ದೀವಾ ಎಂದು ಶಾಸಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *