ಡೀಸೆಲ್ ದರ ಕಡಿಮೆ ಮಾಡದಿದ್ದರೆ ಮಾ.15ರಿಂದ ಸರಕು-ಸಾಗಣೆ ಸ್ಥಗಿತ: ಜಿ.ಆರ್. ಷಣ್ಮುಗಪ್ಪ ಸರ್ಕಾರಕ್ಕೆ ಎಚ್ಚರಿಕೆ 

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಕೇಂದ್ರ ಸರಕಾರ ಡೀಸೆಲ್, ಟೋಲ್‍, ವಿಮೆ ದರವನ್ನು ಕಡಿಮೆ ಮಾಡದಿದ್ದರೆ ದೇಶದೆಲ್ಲೆಡೆ ಸರಕು-ಸಾಗಣೆ ವಾಹನಗಳನ್ನು ಮಾ.15ರಿಂದ ಸ್ಥಗಿತಗೊಳಿಸಲಾಗುವುದೆಂದು ಕರ್ನಾಟಕ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಲಾರಿ ಮಾಲೀಕರ  ಸಮಸ್ಯೆಗಳ ಬಗ್ಗೆ ಸರಕಾರಕ್ಕೆ ಅನೇಕ ಸಲ ಮನವಿ ಮಾಡಿದ್ದೇವೆ. ಆದರೆ, ಸರಕಾರಿ ಅಧಿಕಾರಿಗಳು ನಮ್ಮ ಕೋರಿಕೆಯನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದರು.

ಕೇಂದ್ರ ಸರಕಾರ ಡೀಸೆಲ್ ದರವನ್ನು ಸತತವಾಗಿ ಏರಿಕೆ ಮಾಡುತ್ತಿದೆ.  ಹೋಗುತ್ತಿದೆ. ಈ ಹಿಂದೆ ಪ್ರತಿ ಕಿಮೀಗೆ 28ರೂ.ಖರ್ಚು ಮಾಡುತ್ತಿದ್ದೆವು. ಆದರೆ, ಈಗ 40ರೂ.ಖರ್ಚಾಗುತ್ತಿದೆ. ಇದರಿಂದ ಲಾರಿ ಮಾಲಕರು ನಷ್ಟದಿಂದಲೇ ವ್ಯವಹಾರ ಮಾಡುತ್ತಿದ್ದಾರೆಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಟೋಲ್ ವೆಚ್ಚವೂ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಾಗೂ ನಿರಂತರವಾಗಿ ಹೊಸ ಟೋಲ್‍ಗಳನ್ನು ಸೇರಿಸಲಾಗುತ್ತಿದೆ. ಒಪ್ಪಂದ ಮುಗಿದ ಅನೇಕ ಟೋಲ್‍ಗಳಲ್ಲಿ ಕಾನೂನು ಬಾಹಿರವಾಗಿ ಹಣ ಸಂಗ್ರಹಿಸಲಾಗುತ್ತಿದೆ. ನೈಸ್ ರಸ್ತೆಯಲ್ಲಿ ಪ್ರತಿ ದಿನ ವಾಣಿಜ್ಯ ವಾಹನಗಳಿಂದ 1.5ಕೋಟಿ ರೂ.ಸಂಗ್ರಹ ಮಾಡಲಾಗುತ್ತಿದೆ. ಪ್ರತಿ ಲಾರಿ 1100 ರೂ.ನೀಡಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಹಸಿರು ತೆರಿಗೆ ಹೆಚ್ಚಳ, ಬಿಎಸ್ 6ವಾಹನಗಳ ವೆಚ್ಚ ಹೆಚ್ಚಳ ಹಾಗೂ ವಾಹನ ಬಿಡಿಭಾಗಗಳ ದರ ಹೆಚ್ಚಳ ಸೇರಿದಂತೆ ಲಾರಿ ಮಾಲಕರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಇವೆಲ್ಲ ಸಮಸ್ಯೆಗಳನ್ನು ಕೂಡಲೇ ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಲಾರಿ ಮಾಲಕರೊಂದಿಗೆ ಸಕರಾತ್ಮಕವಾಗಿ ಚರ್ಚಿಸಬೇಕು. ಇಲ್ಲದಿದ್ದರೆ, ಮಾ.15ರಿಂದ ದೇಶಾದ್ಯಂತ ಜಿಲ್ಲೆ, ತಾಲೂಕು ಮಟ್ಟದ ಉದ್ಯಮದಲ್ಲಿ ತೊಡಗಿರುವ ಲಾರಿ ಮಾಲಕರು ತಮ್ಮ ವಾಹನಗಳನ್ನು ಸ್ಥಗಿತಗೊಳಿಸಲಿದ್ದಾರೆಂದು ಅವರು ಎಚ್ಚರಿಕೆ ನೀಡಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *