ಡಿವಿಜಿ ಸುದ್ದಿ, ಬೆಂಗಳೂರು: ವಿಪಕ್ಷ ನಾಯಕ ಸಿದ್ಧರಾಮಯ್ಯ ಮತ್ತು ಸಚಿವ ಸಿ.ಟಿ ರವಿ ಅವರ ನಡುವೆ, ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ವಿಚಾರ ಬಗ್ಗೆ ಟ್ವಿಟ್ ನಲ್ಲಿ ಒಬ್ಬರಿಗೊಬ್ಬರು ಕುಟುಕಿದ್ದಾರೆ.
ಸಾವರ್ಕರ್ಗೆ ಭಾರತ ರತ್ನ ಕೊಡುವ ಬಗ್ಗೆ ಬಿಜೆಪಿಯ ಮಹಾರಾಷ್ಟ್ರ ಘಟಕ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರೋಧಿಸಿದ್ದರು. ಮಹಾರಾಷ್ಟ್ರ ಬಿಜೆಪಿ ಸರ್ಕಾರದ ನಿಲುವನ್ನು ಸಚಿವ ಸಿ.ಟಿ. ರವಿಅವರು ಸಮರ್ಥಿಸಿಕೊಂದರು.
ಈ ವಿಚಾರದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪರ-ವಿರೋಧ ಚರ್ಚೆ ಆಗಿವೆ. ಇದಲ್ಲದೆ, ಈ ಇಬ್ಬರೂ ನಾಯಕರು ಮಾಧ್ಯಮಗಳಿಗೆ ನೀಡಿದ ಹೇಳಿಕೆ ನೀಡುವಾಗ ಮತ್ತು ಭಾಷಣಗಳಲ್ಲಿ ಇದೇ ವಿಷಯವನ್ನು ಪ್ರಸ್ತಾಪಿಸಿ ಆರೋಪ -ಪ್ರತ್ಯಾರೋಪಗಳನ್ನು ಮಾಡುತ್ತಿದ್ದರು. ಇಷ್ಟಕ್ಕೆ ಸುಮ್ಮನಾಗದೆ ಇದೀಗ ಟ್ವೀಟ್ ವಾರ್ ಶುರು ಮಾಡಿದ್ದಾರೆ.
ಈ ಇಬ್ಬರು ನಾಯಕರ ಟ್ವಿಟ್ ವಾರ್ ಹೇಗಿದೆ ಗೊತ್ತಾ..?
‘ಮಹಾತ್ಮ ಗಾಂಧಿ ಹತ್ಯೆಯ ಸಂಚುಕೋರ ಎನ್ನುವ ಮೂಲಕ ರಾಷ್ಟ್ರೀಯವಾದಿ ವೀರ ಸಾವರ್ಕರ್ ಅವರನ್ನು ನೀವು ಅವಮಾನಿಸಿದ್ದೀರಿ. ಮುಖ್ಯಮಂತ್ರಿ ಹುದ್ದೆ ಕಳೆದುಕೊಂಡ ಬಳಿಕ ನೀವು ಮಾನಸಿಕವಾಗಿ ವೈಕಲ್ಯಕ್ಕೆ ತುತ್ತಾಗಿದ್ದೀರಾ? ಇತಿಹಾಸದ ಬಗ್ಗೆ ನಿಮಗೆ ಏನಾದರೂ ತಿಳಿದಿದೆಯೇ? ಯಾಕೆ ನೀವು ಸೆಲ್ಯುಲರ್ ಜೈಲಿಗೆ ಭೇಟಿ ನೀಡಬಾರದು! ನಿಮ್ಮ ಪ್ರವಾಸಕ್ಕೆ ನಾನು ವ್ಯವಸ್ಥೆ ಮಾಡುತ್ತೇನೆ’ ಎಂದು ಸಿ.ಟಿ.ರವಿ, ಟ್ವೀಟ್ ಮಾಡಿದ್ದರು.
Dear @siddaramaiah,
You have accused Nationalist Veer Savarkar as Conspirator in the assassination of Mahatma Gandhi.
Are You mentally handicapped after loosing Chief Minister's post? Do You have any idea of History?
Why don't You visit Cellular Jail! I will sponsor Your trip.
— C T Ravi 🇮🇳 ಸಿ ಟಿ ರವಿ (@CTRavi_BJP) October 19, 2019
‘ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರ ಸಾಯಿಸಿದವರಿಗೂ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ!. ನಮ್ಮಂತಹವರು ಇತಿಹಾಸ ಓದಿ, ಸತ್ಯ ತಿಳಿದು ಮಾತನಾಡುತ್ತೇವೆ’ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಮ್ಮನ್ನು ಟೀಕಿಸಿದ ಸಚಿವ ಸಿ.ಟಿ. ರವಿ ಅವರಿಗೆ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರ ಸಾಯಿಸಿದವರಿಗೂ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ! https://t.co/UIblDZkIkO
— Siddaramaiah (@siddaramaiah) October 19, 2019
ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸುತ್ತಾರೆ.
ನಮ್ಮಂತಹವರು ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು ಇತಿಹಾಸ ಓದಿ,
ಸತ್ಯ ತಿಳಿದುಕೊಂಡು ಮಾತಾಡುತ್ತೇವೆ. https://t.co/UIblDZkIkO— Siddaramaiah (@siddaramaiah) October 19, 2019
‘ಹಿಂದೂ ವಿರೋಧಿ ಹಾಗೂ ಮಹಾ ಕ್ರೂರಿಯಾಗಿದ್ದ ಟಿಪ್ಪು ಜಯಂತಿ ಆಚರಿಸಿ ಅಮಾಯಕರನ್ನು ಕೊಂದವರಿಗೆ ಒಬ್ಬ ದೇಶಭಕ್ತ ಮಹಾತ್ಮ ಗಾಂಧಿಯ ಅವರ ಹತ್ಯೆಯ ಆರೋಪಿಯಾಗಿ ಕಾಣುವುದು ಸಹಜ. ತಮ್ಮ ಅಧಿಕಾರ ಅವಧಿಯಲ್ಲಿ ಹಲವು ಅಧಿಕಾರಿಗಳು ಮತ್ತು ಮುಗ್ದರು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾಗ ರಾಜ್ಯವನ್ನಾಳುತ್ತಿದ್ದವರು ಏನು ಕುಡಿಯುತ್ತಿದ್ದರೋ?’ ಎಂದು ಸಿ.ಟಿ.ರವಿ ಅವರು ಸಿದ್ದರಾಮಯ್ಯ ಟ್ವೀಟ್ ಉಲ್ಲೇಖಿಸಿ ಟೀಕಿಸಿದ್ದಾರೆ.
ಹಿಂದೂ ವಿರೋಧಿ ಹಾಗೂ ಮಹಾ ಕ್ರೂರಿಯಾಗಿದ್ದ ಟಿಪ್ಪು ಜಯಂತಿ ಆಚರಿಸಿ ಅಮಾಯಕರನ್ನು ಕೊಂದವರಿಗೆ ಒಬ್ಬ ದೇಶಭಕ್ತ ಮಹಾತ್ಮ ಗಾಂಧಿಯವರ ಹತ್ಯೆಯ ಆರೋಪಿಯಾಗಿ ಕಾಣುವುದು ಸಹಜ.
ತಮ್ಮ ಅಧಿಕಾರ ಅವಧಿಯಲ್ಲಿ ಹಲವು ಅಧಿಕಾರಿಗಳು ಮತ್ತು ಮುಗ್ದರು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾಗ ರಾಜ್ಯವನ್ನಾಳುತ್ತಿದ್ದವರು ಏನು ಕುಡಿಯುತ್ತಿದ್ದರೋ? https://t.co/SVjZmHgou8
— C T Ravi 🇮🇳 ಸಿ ಟಿ ರವಿ (@CTRavi_BJP) October 19, 2019
‘