ವಿಜಯನಗರ: ಜಿಲ್ಲೆಯ ಹೊಸಪೇಟೆ ನಗರದ ನ್ಯಾಯಾಲಯದ ಆವರಣದಲ್ಲೇ ವಕೀಲರೊಬ್ಬರನ್ನು 22 ವರ್ಷದ ಯುವಕನೊಬ್ಬ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಇಂದು ನಡೆದಿದೆ.
ಹೊಸಪೇಟೆಯ ಚಿತ್ತವಾಡ್ಗಿ ನಿವಾಸಿ ತಾರಿಹಳ್ಳಿ ವೆಂಕಟೇಶ ಕೊಲೆಯಾದ ವ್ಯಕ್ತಿ. ವೆಂಕಟೇಶ್ ಸಂಬಂಧಿ ಹಾಗೂ ಪಕ್ಕದ ಮನೆಯ ಮನೋಜ್ ಮಚ್ಚಿನಿಂದ ಕೊಲೆ ಮಾಡಿದ್ದೇನೆ. ಯುವಕನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ನಗರದ ನ್ಯಾಯಾಲಯದ ಆವರಣದಲ್ಲೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನೋಡಿ, ಜನರು ಬೆಚ್ಚಿ ಬೀಳಿಸಿದೆ. ತಾರಿಹಳ್ಳಿ ವೆಂಕಟೇಶ ಅವರ ಹತ್ಯೆಗೆ ಕಾರಣ ನಿಖರವಾಗಿ ತಿಳಿದು ಬಂದಿಲ್ಲ, ಆದರೆ ಕೌಟುಂಬಿಕ ಕಲಹ, ರಾಜಕೀಯ ದುರುದ್ದೇಶದಿಂದ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.ವೆಂಕಟೇಶ ವೃತ್ತಿಯಲ್ಲಿ ನ್ಯಾಯವಾದಿಯಾಗಿದ್ದರೂ, ಇದರ ಜೊತೆಗೆ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು.



